ವಿಗ್ರಹಗಳ ವಿಸರ್ಜನೆಗಾಗಿ ಮಹಾನಗರ ಪಾಲಿಕೆ 8 ಹೊಂಡಗಳನ್ನು ಸಜ್ಜುಗೊಳಿಸಿದೆ. ಇಲ್ಲಿನ ಕಪಿಲೇಶ್ವರ ಹಳೆಯ ಹೊಂಡ, ಹೊಸ ಹೊಂಡ, ಜಕ್ಕೇರಿ ಹೊಂಡ, ಕಲ್ಮೇಶ್ವರ ಹಳೆಯ ಹೊಂಡ, ಅನಗೋಳದ ಲಾಲ್ ತಲಾವ್, ಮಜಗಾವಿಯ ಬ್ರಹ್ಮದೇವ ಮಂದಿರ ತಲಾವ್, ಕೋಟೆ ಕೆರೆ ಹಾಗೂ ಕಣಬರ್ಗಿ ಕೆರೆಯಲ್ಲಿ ವಿಸರ್ಜನೆಗೆ ವ್ಯವಸ್ಥೆ ಮಾಡಲಾಗಿದೆ. ಅಲ್ಲಲ್ಲಿ ಮೊಬೈಲ್ ಟ್ಯಾಂಕ್ ವ್ಯವಸ್ಥೆ ಸಹ ಮಾಡಲಾಗುವುದು. ಸಾರ್ವಜನಿಕರು ಮತ್ತು ಗಣೇಶ ಮಂಡಳಗಳವರು ಕೋವಿಡ್ ಮಾರ್ಗಸೂಚಿ ಪಾಲಿಸಿಕೊಂಡು ಮೂರ್ತಿಗಳ ವಿಸರ್ಜನೆ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಮಹಾನಗರಪಾಲಿಕೆ ಆಯುಕ್ತ ರುದ್ರೇಶ ಘಾಳಿ ತಿಳಿಸಿದರು.