ಪೌರಾಡಳಿತ ಸಚಿವ ರಮೇಶ ಜಾರಕಿಹೊಳಿ ನೇತೃತ್ವದ ಸೌಭಾಗ್ಯಲಕ್ಷ್ಮಿ ಸಕ್ಕರೆ ಕಾರ್ಖಾನೆಗೆ ಕಬ್ಬು ಸಾಗಿಸಿದ್ದಕ್ಕೆ ಲಾರಿ ಬಾಡಿಗೆ ₹ 90ಸಾವಿರ ಹಾಗೂ ಶಿವಸಾಗರ ಸಕ್ಕರೆ ಕಾರ್ಖಾನೆಗೆ ಪೂರೈಸಿದ್ದ ಕಬ್ಬಿನ ಬಿಲ್ ಬಾಕಿ ₹ 40ಸಾವಿರ ಬಂದಿಲ್ಲ. ಇದರಿಂದಾಗಿ ಜೀವನ ನಿರ್ವಹಣೆಗಾಗಿ ಲಾರಿ ಮಾರಿಕೊಂಡಿದ್ದೇವೆ. ತಂದೆ ಅನಾರೋಗ್ಯಪೀಡಿತರಾಗಿದ್ದಾರೆ. ಇದರಿಂದಾಗಿ ಬಹಳ ನೊಂದಿದ್ದೇವೆ. ಹೀಗಾಗಿ, ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’ ಎಂದು ಪ್ರಧಾನಿ, ಮುಖ್ಯಮಂತ್ರಿ ಹಾಗೂ ಅಧಿಕಾರಿಗಳಿಗೆ ಈ ಕುಟುಂಬದವರು ಪತ್ರ ಬರೆದಿದ್ದರು.