<p><strong>ಬೆಳಗಾವಿ</strong>: ಜಿಲ್ಲೆಯ ವಿವಿಧೆಡೆ ಒಂದು ವಾರದಿಂದ ನಡೆಯುತ್ತಿರುವ ಕಬ್ಬು ಬೆಳೆಗಾರರ ಹೋರಾಟದ ಬಿಸಿ ಸಾರಿಗೆ ಸಂಸ್ಥೆಗೂ ತಟ್ಟಿದೆ. </p>.<p>ಪ್ರತಿಭಟನೆ, ರಸ್ತೆತಡೆ, ಬಂದ್ ಮತ್ತಿತರ ಕಾರಣಕ್ಕೆ ಬಸ್ಗಳ ಕಾರ್ಯಾಚರಣೆ ಸರಿಯಾಗಿ ನಡೆಯದಿರುವುದು, ಪ್ರಯಾಣಿಕರ ಸಂಖ್ಯೆಯಲ್ಲಿ ಇಳಿಕೆ ಮತ್ತಿತರ ಕಾರಣಕ್ಕೆ ಸಾರಿಗೆ ಸಂಸ್ಥೆಯ ಚಿಕ್ಕೋಡಿ ವಿಭಾಗಕ್ಕೆ ₹1.76 ಕೋಟಿ, ಬೆಳಗಾವಿ ವಿಭಾಗಕ್ಕೆ ₹28 ಲಕ್ಷ ಸೇರಿದಂತೆ ಒಟ್ಟು ₹2.04 ಕೋಟಿ ಆದಾಯ ನಷ್ಟವಾಗಿದೆ.</p>.<p>ಕೆಲ ಮಾರ್ಗಗಳಲ್ಲಿ ಬಸ್ ಸಂಚಾರ ಸ್ಥಗಿತವಾಗಿ ಪ್ರಯಾಣಿಕರ ಪರದಾಟ ಮುಂದುವರಿದಿದೆ.</p>.<p>‘ಚಿಕ್ಕೋಡಿ ವಿಭಾಗದಲ್ಲಿ ಪ್ರತಿದಿನ 669 ಬಸ್ ಕಾರ್ಯಾಚರಣೆ ಮಾಡುತ್ತವೆ. ಹೋರಾಟದಿಂದ ಎಲ್ಲ ಬಸ್ ಕಾರ್ಯಾಚರಣೆ ಮಾಡುತ್ತಿಲ್ಲ. ಮಾರ್ಗ ಬದಲಾವಣೆ ಮಾಡಿ ಓಡಿಸಿದರೂ ಹೆಚ್ಚಿನ ಪ್ರಯಾಣಿಕರಿಲ್ಲ. 2025ರ ಅಕ್ಟೋಬರ್ನಲ್ಲಿ ಬಸ್ಗಳ ಕಾರ್ಯಾಚರಣೆಯಿಂದ ದಿನಕ್ಕೆ ₹1.30 ಕೋಟಿ ಆದಾಯ ಬರುತ್ತಿತ್ತು. ಗುರುವಾರ ₹84 ಲಕ್ಷವಷ್ಟೇ ಬಂದಿದೆ’ ಎಂದು ಸಾರಿಗೆ ಸಂಸ್ಥೆಯ ಚಿಕ್ಕೋಡಿ ವಿಭಾಗೀಯ ಸಂಚಾರ ಅಧಿಕಾರಿ ಎ.ಆರ್.ಛಬ್ಬಿ ‘ಪ್ರಜಾವಾಣಿ’ಗೆ ತಿಳಿಸಿದರು.</p>.<h2>ನಿರೀಕ್ಷಿತ ಆದಾಯವಿಲ್ಲ</h2><p>‘ಬೆಳಗಾವಿ ವಿಭಾಗದಲ್ಲಿ ನಿತ್ಯ 640 ಬಸ್ ಕಾರ್ಯಾಚರಣೆ ಮಾಡುತ್ತವೆ. ರೈತರ ಹೋರಾಟದ ಹಿನ್ನೆಲೆಯಲ್ಲಿ ಕೆಲ ಮಾರ್ಗಗಳಲ್ಲಿ ಬಸ್ಗಳ ಕಾರ್ಯಾಚರಣೆಗೆ ತೊಡಕಾಗಿದ್ದು, ನಿರೀಕ್ಷಿತ ಆದಾಯ ಬರುತ್ತಿಲ್ಲ’ ಎನ್ನುತ್ತಾರೆ ಸಾರಿಗೆ ಸಂಸ್ಥೆಯ ಬೆಳಗಾವಿ ವಿಭಾಗೀಯ ನಿಯಂತ್ರಣಾಧಿಕಾರಿ ಕೆ.ಎಲ್.ಗುಡೆನ್ನವರ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ಜಿಲ್ಲೆಯ ವಿವಿಧೆಡೆ ಒಂದು ವಾರದಿಂದ ನಡೆಯುತ್ತಿರುವ ಕಬ್ಬು ಬೆಳೆಗಾರರ ಹೋರಾಟದ ಬಿಸಿ ಸಾರಿಗೆ ಸಂಸ್ಥೆಗೂ ತಟ್ಟಿದೆ. </p>.<p>ಪ್ರತಿಭಟನೆ, ರಸ್ತೆತಡೆ, ಬಂದ್ ಮತ್ತಿತರ ಕಾರಣಕ್ಕೆ ಬಸ್ಗಳ ಕಾರ್ಯಾಚರಣೆ ಸರಿಯಾಗಿ ನಡೆಯದಿರುವುದು, ಪ್ರಯಾಣಿಕರ ಸಂಖ್ಯೆಯಲ್ಲಿ ಇಳಿಕೆ ಮತ್ತಿತರ ಕಾರಣಕ್ಕೆ ಸಾರಿಗೆ ಸಂಸ್ಥೆಯ ಚಿಕ್ಕೋಡಿ ವಿಭಾಗಕ್ಕೆ ₹1.76 ಕೋಟಿ, ಬೆಳಗಾವಿ ವಿಭಾಗಕ್ಕೆ ₹28 ಲಕ್ಷ ಸೇರಿದಂತೆ ಒಟ್ಟು ₹2.04 ಕೋಟಿ ಆದಾಯ ನಷ್ಟವಾಗಿದೆ.</p>.<p>ಕೆಲ ಮಾರ್ಗಗಳಲ್ಲಿ ಬಸ್ ಸಂಚಾರ ಸ್ಥಗಿತವಾಗಿ ಪ್ರಯಾಣಿಕರ ಪರದಾಟ ಮುಂದುವರಿದಿದೆ.</p>.<p>‘ಚಿಕ್ಕೋಡಿ ವಿಭಾಗದಲ್ಲಿ ಪ್ರತಿದಿನ 669 ಬಸ್ ಕಾರ್ಯಾಚರಣೆ ಮಾಡುತ್ತವೆ. ಹೋರಾಟದಿಂದ ಎಲ್ಲ ಬಸ್ ಕಾರ್ಯಾಚರಣೆ ಮಾಡುತ್ತಿಲ್ಲ. ಮಾರ್ಗ ಬದಲಾವಣೆ ಮಾಡಿ ಓಡಿಸಿದರೂ ಹೆಚ್ಚಿನ ಪ್ರಯಾಣಿಕರಿಲ್ಲ. 2025ರ ಅಕ್ಟೋಬರ್ನಲ್ಲಿ ಬಸ್ಗಳ ಕಾರ್ಯಾಚರಣೆಯಿಂದ ದಿನಕ್ಕೆ ₹1.30 ಕೋಟಿ ಆದಾಯ ಬರುತ್ತಿತ್ತು. ಗುರುವಾರ ₹84 ಲಕ್ಷವಷ್ಟೇ ಬಂದಿದೆ’ ಎಂದು ಸಾರಿಗೆ ಸಂಸ್ಥೆಯ ಚಿಕ್ಕೋಡಿ ವಿಭಾಗೀಯ ಸಂಚಾರ ಅಧಿಕಾರಿ ಎ.ಆರ್.ಛಬ್ಬಿ ‘ಪ್ರಜಾವಾಣಿ’ಗೆ ತಿಳಿಸಿದರು.</p>.<h2>ನಿರೀಕ್ಷಿತ ಆದಾಯವಿಲ್ಲ</h2><p>‘ಬೆಳಗಾವಿ ವಿಭಾಗದಲ್ಲಿ ನಿತ್ಯ 640 ಬಸ್ ಕಾರ್ಯಾಚರಣೆ ಮಾಡುತ್ತವೆ. ರೈತರ ಹೋರಾಟದ ಹಿನ್ನೆಲೆಯಲ್ಲಿ ಕೆಲ ಮಾರ್ಗಗಳಲ್ಲಿ ಬಸ್ಗಳ ಕಾರ್ಯಾಚರಣೆಗೆ ತೊಡಕಾಗಿದ್ದು, ನಿರೀಕ್ಷಿತ ಆದಾಯ ಬರುತ್ತಿಲ್ಲ’ ಎನ್ನುತ್ತಾರೆ ಸಾರಿಗೆ ಸಂಸ್ಥೆಯ ಬೆಳಗಾವಿ ವಿಭಾಗೀಯ ನಿಯಂತ್ರಣಾಧಿಕಾರಿ ಕೆ.ಎಲ್.ಗುಡೆನ್ನವರ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>