‘ಕೃಷಿ ಸಾಲನೀತಿ ಬದಲಾಗಬೇಕು. ಎಲ್ಲ ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಬಡ್ಡಿ ರಹಿತ ಸಾಲ ಸೌಕರ್ಯ ಒದಗಿಸಬೇಕು. ಸಕ್ಕರೆ ಕಾರ್ಖಾನೆಗಳು ಸಕ್ಕರೆ ಇಳುವರಿಯಲ್ಲಿ ಮಾಡುವ ಮೋಸ ತಪ್ಪಿಸಲು ವೈಜ್ಞಾನಿಕವಾದ ಮಾನದಂಡ ಅಳವಡಿಸಬೇಕು. ಕೃಷಿಗೆ ಬಳಸಲಾಗುವ ಕೀಟನಾಸಕ, ರಸಗೊಬ್ಬರ, ಹನಿ ನೀರಾವರಿ ಪದ್ಧತಿ ಉಪಕರಣಗಳು ಮತ್ತು ಟ್ರ್ಯಾಕ್ಟರ್ಗಳ ಬಿಡಿಭಾಗಗಳಿಗೆ ಜಿಎಸ್ಟಿ ವಿಧಿಸುತ್ತಿರುವುದನ್ನು ರದ್ದುಪಡಿಸಬೇಕು’ ಎಂದು ಆಗ್ರಹಿಸಿದರು.