ಸತ್ತಿಗೇರಿ: ಸಾಲಬಾಧೆ ತಾಳಲಾರದೆ ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸತ್ತಿಗೇರಿಯಲ್ಲಿ ಶುಕ್ರವಾರ ನಡೆದಿದೆ.
ಈರಣ್ಣಾ ಶ್ರೀಶೈಲಪ್ಪ ಪಟ್ಟಣಶೆಟ್ಟಿ (29) ಮೃತರು. ಅವರು ಬ್ಯಾಂಕ್ ಮತ್ತು ಪ್ರಾಥಮಿಕ ಕೃಷಿಪತ್ತಿನ ಸಂಘದಲ್ಲಿ ಸಾಲ ಪಡೆದಿದ್ದರು. ಮಳೆ ಕೊರತೆಯಿಂದಾಗಿ ಬೆಳೆ ಕೈಕೊಟ್ಟಿದ್ದರಿಂದ ಆರ್ಥಿಕ ಸಂಕಷ್ಟಕ್ಕೆ ತುತ್ತಾಗಿದ್ದರು ಎಂದು ಕುಟುಂಬದವರು ತಿಳಿಸಿದ್ದಾರೆ.