ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂಗಾರು ಹಂಗಾಮು: ಬೆಳೆ ಸಮೀಕ್ಷೆ ‘ಆ್ಯಪ್‌’

Last Updated 1 ಜುಲೈ 2021, 16:12 IST
ಅಕ್ಷರ ಗಾತ್ರ

ಬೆಳಗಾವಿ: ‘ಜಿಲ್ಲೆಯಲ್ಲಿ 2021–22ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಯನ್ನು ಮೊಬೈಲ್ ಆ್ಯಪ್‌ ಮೂಲಕ ದಾಖಲಿಸುವ ಯೋಜನೆಯನ್ನು ಸರ್ಕಾರದಿಂದ ಪ್ರಾರಂಭಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದ್ದಾರೆ.

‘ಹಂಗಾಮಿನಲ್ಲಿ ರೈತರು ತಾವು ಬೆಳೆದ ಬೆಳೆಗಳ ಮಾಹಿತಿಯನ್ನು ಛಾಯಾಚಿತ್ರಸಹಿತ ಅಪ್‌ಲೋಡ್ ಮಾಡಬಹುದಾಗಿದೆ. ಕಂದಾಯ, ಕೃಷಿ, ತೋಟಗಾರಿಕೆ, ರೇಷ್ಮೆ, ಹಾಗೂ ಸಾಂಖಿಕ ಇಲಾಖೆ ಜಂಟಿ ಸಹಯೋಗದಲ್ಲಿ ಸಮೀಕ್ಷೆ ನಡೆಯಲಿದೆ. ಸಂಗ್ರಹವಾದ ಮಾಹಿತಿಯನ್ನು ತಾಲ್ಲೂಕು ಆಡಳಿತ ಪರಿಶೀಲಿಸಲಿದೆ’ ಎಂದು ಹೇಳಿದ್ದಾರೆ.

‘ರೈತರು ಸ್ಮಾರ್ಟ್ ಮೊಬೈಲ್‌ ಫೋನ್ ಉಪಯೋಗಿಸಿ ಆ್ಯಪ್‌ ಅನ್ನು ಗೂಗಲ್‌ನ ಪ್ಲೇ ಸ್ಟೋರ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು. ರೈತರ ಪರವಾಗಿ ಅವರ ಕುಟುಂಬದ ಸದಸ್ಯರು, ಸಂಬಂಧಿಕರು ಅಥವಾ ಕಂದಾಯ/ ಕೃಷಿ ಇಲಾಖೆಯಿಂದ ನಿಯೋಜನೆಗೊಂಡ ಅದೇ ಗ್ರಾಮದ ಯುವಕರ (ಖಾಸಗಿ ನಿವಾಸಿ/ ಪಿ.ಆರ್) ಸಹಾಯದೊಂದಿಗೆ ನಿರ್ವಹಿಸಬಹುದು. ಮೊಬೈಲ್ ಫೋನ್‌ ಸಂಖ್ಯೆಗೆ ಒ.ಟಿ.ಪಿ. ಪಡೆದು ಮೂಲಕ ಜಮೀನುಗಳಲ್ಲಿನ (ಹಿಸ್ಸಾವಾರು) ಬೆಳೆಗಳ ಮಾಹಿತಿ ದಾಖಲಿಸಬಹುದು’ ಎಂದು ತಿಳಿಸಿದ್ದಾರೆ.

‘ನಿಗದಿತ ಸಮಯದಲ್ಲಿ ಮಾಹಿತಿ ಅಪ್‌ಲೋಡ್ ಮಾಡದಿದ್ದಲ್ಲಿ ಪ್ರತಿ ಗ್ರಾಮಕ್ಕೆ ನಿಯೋಜನೆಗೊಂಡ ಬೆಳೆ ಸಮೀಕ್ಷಕರು ಹೊಲಗಳಿಗೆ ಭೇಟಿ ನೀಡಿ ಮೊಬೈಲ್ ಆ್ಯಪ್‌ ಬಳಸಿ ಮಾಹಿತಿ ದಾಖಲಿಸುತ್ತಾರೆ’ ಎಂದು ಮಾಹಿತಿ ನೀಡಿದ್ದಾರೆ.

‘ಸಮೀಕ್ಷೆಯ ಮಾಹಿತಿಯನ್ನು ಸಾಂಖ್ಯಿಕ ಇಲಾಖೆಯ ಕೃಷಿ, ತೋಟಗಾರಿಕೆ, ರೇಷ್ಮೆ ಬೆಳೆ ವಿಸ್ತೀರ್ಣ ಎಣಿಕಾ ಕಾರ್ಯದಲ್ಲಿ ಬಳಸಲು ಅನುಮತಿಸಲಾಗಿದೆ. ಪ್ರಾಕೃತಿಕ ವಿಕೋಪದ ಸಂದರ್ಭ ಬೆಳೆ ಹಾನಿ ಸಹಾಯಧನ ನೀಡಲು ವರದಿ ತಯಾರಿಸಲು ಬಳಸಲಾಗುವುದು. ಬೆಳೆ ವಿಮೆ ಯೋಜನೆಯಡಿ ರೈತರ ತಾಕುವಾರು ಬೆಳೆ ಪರಿಶೀಲನೆಗೆ, ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮತ್ತು ಬೆಳೆ ಮಾನದಂಡಗಳಿಗೆ ಅನುಗುಣವಾಗಿ ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳ ಫಲಾನುಭವಿ ಆಧಾರಿತ ಯೋಜನೆಗಳ ಅನುಷ್ಠಾನದಲ್ಲಿ ಆಧಾರವಾಗಿ ಇಟ್ಟುಕೊಳ್ಳಲಾಗುವುದು’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT