‘ಹೋರಾಟದ ಫಲವಾಗಿ ಕುಲವಳ್ಳಿಗೆ ಭೇಟಿ ನೀಡಿದ್ದ ಹಿಂದಿನ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಅವರು, ಸಾಗುವಳಿದಾರರು ಅರ್ಜಿ ಸಲ್ಲಿಸಲು (ನಮೂನೆ 57) ಸಹಕರಿಸಿದ್ದರು. ಆದರೆ, ಪಹಣಿ ಪತ್ರಿಕೆಯಲ್ಲಿ ಬೇನಾಮಿ ಹೆಸರುಗಳು ದಾಖಲಾಗಿವೆ. ಇತ್ತ ಸರ್ಕಾರ ಗಮನಹರಿಸಬೇಕು. ಹಿಂದಿನಿಂದಲೂ ಸಾಗುವಳಿ ಮಾಡಿಕೊಂಡು ಬಂದಿರುವವರಿಗೆ ನೆರವಾಗಬೇಕು’ ಎಂದು ಒತ್ತಾಯಿಸಿದರು.