<p><strong>ಬೆಳಗಾವಿ:</strong> ‘ಕೋವಿಡ್ ಲಾಕ್ಡೌನ್ನಿಂದಾಗಿ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಸಣ್ಣ ರೈತರು ಮತ್ತು ಕೃಷಿ ಕೂಲಿ ಕಾರ್ಮಿಕರಿಗೆ ₹ 50ಸಾವಿರ ಪರಿಹಾರ ನೀಡಬೇಕು. ಕೃಷಿಕರ ಮಕ್ಕಳ ಶೈಕ್ಷಣಿಕ ಸಾಲ ಮನ್ನಾ ಮಾಡಬೇಕು’ ಎಂದು ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.</p>.<p>‘ಲಾಕ್ಡೌನ್ ಪರಿಣಾಮ ಕೃಷಿ ಉತ್ಪನ್ನಗಳಿಗೆ ಸರಿಯಾದ ಬೆಲೆ ಸಿಗದೆ ಸಣ್ಣ ರೈತರು ಮತ್ತು ಕೆಲಸ ಸಿಗದೆ ಕೃಷಿ ಕೂಲಿ ಕಾರ್ಮಿಕರು ಬಹಳ ತೊಂದರೆ ಅನುಭವಿಸಿದ್ದಾರೆ. ಹೀಗಾಗಿ, ಜೀವನ ನಡೆಸುವುದೇ ದುಸ್ತರವಾಗಿದೆ. ಕೃಷಿಕರ ಮಕ್ಕಳು ಶೈಕ್ಷಣಿಕ ಸಾಲ ತೀರಿಸುವುದು ಕಷ್ಟಸಾಧ್ಯವಾಗಿದೆ. ಹೀಗಾಗಿ, ಸರ್ಕಾರ ಈ ವರ್ಗದ ಎಲ್ಲರಿಗೂ ಆರ್ಥಿಕವಾಗಿ ನೆರವಾಗಬೇಕು’ ಎಂದು ಒತ್ತಾಯಿಸಿದರು.</p>.<p>ಮುಖಂಡ ಅಪ್ಪಾಸಾಹೇಬ ದೇಸಾಯಿ ಮಾತನಾಡಿ, ‘ಸಣ್ಣ ರೈತರಿಗೆ ಕೋವಿಡ್ ಪ್ಯಾಕೇಜ್ನಲ್ಲಿ ಪರಿಹಾರ ದೊರೆಯುವಂತಾಗಲು ಸರ್ಕಾರದ ನಿಯಮಗಳನ್ನು ಸಡಿಲಿಸಬೇಕು. ಅರ್ಹ ರೈತರನ್ನು ಗುರುತಿಸಿ ಪರಿಹಾರ ವಿತರಿಸಬೇಕು. ಹೆಚ್ಚು ಸಂಕಷ್ಟದಲ್ಲಿರುವ ಸಣ್ಣ ಮೊದಲ ಆದ್ಯತೆ ಕೊಡಬೇಕು’ ಎಂದು ಆಗ್ರಹಿಸಿದರು.</p>.<p>ಸುಭಾಷ ದಾಯಗೊಂಡ, ರಾಮಚಂದ್ರ ಫಡಕೆ, ರಾಮನಗೌಡ ಪಾಟೀಲ, ಟೋಪಣ್ಣ ಬಸರೀಕಟ್ಟಿ, ಮಾರುತಿ ಬುರಲಿ, ನಾಮದೇವ ದುಡುಂ, ರಾಜು ಕಾಗಣೇಕರ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ಕೋವಿಡ್ ಲಾಕ್ಡೌನ್ನಿಂದಾಗಿ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಸಣ್ಣ ರೈತರು ಮತ್ತು ಕೃಷಿ ಕೂಲಿ ಕಾರ್ಮಿಕರಿಗೆ ₹ 50ಸಾವಿರ ಪರಿಹಾರ ನೀಡಬೇಕು. ಕೃಷಿಕರ ಮಕ್ಕಳ ಶೈಕ್ಷಣಿಕ ಸಾಲ ಮನ್ನಾ ಮಾಡಬೇಕು’ ಎಂದು ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.</p>.<p>‘ಲಾಕ್ಡೌನ್ ಪರಿಣಾಮ ಕೃಷಿ ಉತ್ಪನ್ನಗಳಿಗೆ ಸರಿಯಾದ ಬೆಲೆ ಸಿಗದೆ ಸಣ್ಣ ರೈತರು ಮತ್ತು ಕೆಲಸ ಸಿಗದೆ ಕೃಷಿ ಕೂಲಿ ಕಾರ್ಮಿಕರು ಬಹಳ ತೊಂದರೆ ಅನುಭವಿಸಿದ್ದಾರೆ. ಹೀಗಾಗಿ, ಜೀವನ ನಡೆಸುವುದೇ ದುಸ್ತರವಾಗಿದೆ. ಕೃಷಿಕರ ಮಕ್ಕಳು ಶೈಕ್ಷಣಿಕ ಸಾಲ ತೀರಿಸುವುದು ಕಷ್ಟಸಾಧ್ಯವಾಗಿದೆ. ಹೀಗಾಗಿ, ಸರ್ಕಾರ ಈ ವರ್ಗದ ಎಲ್ಲರಿಗೂ ಆರ್ಥಿಕವಾಗಿ ನೆರವಾಗಬೇಕು’ ಎಂದು ಒತ್ತಾಯಿಸಿದರು.</p>.<p>ಮುಖಂಡ ಅಪ್ಪಾಸಾಹೇಬ ದೇಸಾಯಿ ಮಾತನಾಡಿ, ‘ಸಣ್ಣ ರೈತರಿಗೆ ಕೋವಿಡ್ ಪ್ಯಾಕೇಜ್ನಲ್ಲಿ ಪರಿಹಾರ ದೊರೆಯುವಂತಾಗಲು ಸರ್ಕಾರದ ನಿಯಮಗಳನ್ನು ಸಡಿಲಿಸಬೇಕು. ಅರ್ಹ ರೈತರನ್ನು ಗುರುತಿಸಿ ಪರಿಹಾರ ವಿತರಿಸಬೇಕು. ಹೆಚ್ಚು ಸಂಕಷ್ಟದಲ್ಲಿರುವ ಸಣ್ಣ ಮೊದಲ ಆದ್ಯತೆ ಕೊಡಬೇಕು’ ಎಂದು ಆಗ್ರಹಿಸಿದರು.</p>.<p>ಸುಭಾಷ ದಾಯಗೊಂಡ, ರಾಮಚಂದ್ರ ಫಡಕೆ, ರಾಮನಗೌಡ ಪಾಟೀಲ, ಟೋಪಣ್ಣ ಬಸರೀಕಟ್ಟಿ, ಮಾರುತಿ ಬುರಲಿ, ನಾಮದೇವ ದುಡುಂ, ರಾಜು ಕಾಗಣೇಕರ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>