<p>ಐಗಳಿ: ‘ಅಥಣಿ ತಾಲ್ಲೂಕಿನಲ್ಲಿ ಮಳೆ ಕೊರತೆಯಿಂದಾಗಿ ತೊಗರಿ ಬೆಳೆ ಒಣಗುತ್ತಿದೆ. ಇದರಿಂದ ಬೆಳೆಗಾರರು ನಷ್ಟ ಅನುಭವಿಸಿದ್ದು ಸರ್ಕಾರ ಸಮಗ್ರ ಸಮೀಕ್ಷೆ ನಡೆಸಿ ಯೋಗ್ಯ ಪರಿಹಾರ ನೀಡಬೇಕು. ತಾಲ್ಲೂಕನ್ನು ಬರಪೀಡಿತವೆಂದು ಘೋಷಿಸಬೇಕು’ ಎಂದು ಮುಖಂ ಕೇದಾರಿಗೌಡ ಬಿರಾದಾರ ಆಗ್ರಹಿಸಿದ್ದಾರೆ.</p>.<p>‘ಮಳೆಯಾಶ್ರಿತ ಪ್ರದೇಶದ ರೈತರ ಬದುಕು ದುಸ್ತರವಾಗಿದೆ. ಹಲವು ಗ್ರಾಮಗಳ ವ್ಯಾಪ್ತಿಯಲ್ಲಿ ಮಳೆಯಾಗಿಲ್ಲ. ಹೀಗಾಗಿ ತೊಗರಿ ಬೆಳೆ ಕೈಗೆ ಬರುತ್ತಿಲ್ಲ. ಸರ್ಕಾರ ರೈತರ ನೆರವಿಗೆ ಬರಬೇಕು’ ಎಂದು ಮುಖಂಡರಾದ ಯಲ್ಲಪ್ಪ ಮಿರ್ಜಿ ಮತ್ತು ಶಂಕರಗೌಡ ಪಾಟೀಲ ಒತ್ತಾಯಿಸಿದ್ದಾರೆ.</p>.<p>‘ತೆಲಸಂಗ ಹೋಬಳಿಯಲ್ಲಿ 8ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ತೊಗರಿ ಬೆಳೆ ಇದೆ. ಶೇ 80ರಷ್ಟು ನೀರಿನ ಕೊರತೆಯಿಂದ ಹಾಳಾಗಿದೆ. ಇದರ ಸಮಗ್ರ ವರದಿಯನ್ನು ಹಿರಿಯ ಅಧಿಕಾರಿಗಳಿಗೆ ಸಲ್ಲಿಸಲಾಗಿದೆ’ ಎಂದು ಕೃಷಿ ಅಧಿಕಾರಿ ಯಂಕಪ್ಪ ಉಪ್ಪಾರ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಐಗಳಿ: ‘ಅಥಣಿ ತಾಲ್ಲೂಕಿನಲ್ಲಿ ಮಳೆ ಕೊರತೆಯಿಂದಾಗಿ ತೊಗರಿ ಬೆಳೆ ಒಣಗುತ್ತಿದೆ. ಇದರಿಂದ ಬೆಳೆಗಾರರು ನಷ್ಟ ಅನುಭವಿಸಿದ್ದು ಸರ್ಕಾರ ಸಮಗ್ರ ಸಮೀಕ್ಷೆ ನಡೆಸಿ ಯೋಗ್ಯ ಪರಿಹಾರ ನೀಡಬೇಕು. ತಾಲ್ಲೂಕನ್ನು ಬರಪೀಡಿತವೆಂದು ಘೋಷಿಸಬೇಕು’ ಎಂದು ಮುಖಂ ಕೇದಾರಿಗೌಡ ಬಿರಾದಾರ ಆಗ್ರಹಿಸಿದ್ದಾರೆ.</p>.<p>‘ಮಳೆಯಾಶ್ರಿತ ಪ್ರದೇಶದ ರೈತರ ಬದುಕು ದುಸ್ತರವಾಗಿದೆ. ಹಲವು ಗ್ರಾಮಗಳ ವ್ಯಾಪ್ತಿಯಲ್ಲಿ ಮಳೆಯಾಗಿಲ್ಲ. ಹೀಗಾಗಿ ತೊಗರಿ ಬೆಳೆ ಕೈಗೆ ಬರುತ್ತಿಲ್ಲ. ಸರ್ಕಾರ ರೈತರ ನೆರವಿಗೆ ಬರಬೇಕು’ ಎಂದು ಮುಖಂಡರಾದ ಯಲ್ಲಪ್ಪ ಮಿರ್ಜಿ ಮತ್ತು ಶಂಕರಗೌಡ ಪಾಟೀಲ ಒತ್ತಾಯಿಸಿದ್ದಾರೆ.</p>.<p>‘ತೆಲಸಂಗ ಹೋಬಳಿಯಲ್ಲಿ 8ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ತೊಗರಿ ಬೆಳೆ ಇದೆ. ಶೇ 80ರಷ್ಟು ನೀರಿನ ಕೊರತೆಯಿಂದ ಹಾಳಾಗಿದೆ. ಇದರ ಸಮಗ್ರ ವರದಿಯನ್ನು ಹಿರಿಯ ಅಧಿಕಾರಿಗಳಿಗೆ ಸಲ್ಲಿಸಲಾಗಿದೆ’ ಎಂದು ಕೃಷಿ ಅಧಿಕಾರಿ ಯಂಕಪ್ಪ ಉಪ್ಪಾರ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>