ಎರಡು ಎಕರೆ ಜಮೀನು ಹೊಂದಿರುವ ಅವರು ಬೆಂಡೆಕಾಯಿ, ಮೆಣಸಿನಕಾಯಿ, ಬದನೆ, ಸೌತೆಕಾಯಿ, ಸೋರೆಕಾಯಿ, ಹೀರೇಕಾಯಿ ಮೊದಲಾದ ತರಕಾರಿ ಬೆಳೆಗಳನ್ನೇ ನಂಬಿಕೊಂಡಿದ್ದಾರೆ. ಲಾಕ್ಡೌನ್ನಿಂದ ಸಂತೆಗಳು ನಡೆಯುತ್ತಿಲ್ಲ. ಮದುವೆ ಮತ್ತಿತರ ಸಮಾರಂಭಗಳಿಲ್ಲ. ಹೋಟೆಲ್ಗಳಿಲ್ಲ. ನೆರೆಯ ಮಹಾರಾಷ್ಟ್ರದ ಮುಂಬೈ ಮಾರುಕಟ್ಟೆಯೂ ಬಂದ್ ಆಗಿದೆ. ಜಾತ್ರೆಗಳಿಲ್ಲ. ಇವೆಲ್ಲದರ ಪರಿಣಾಮ ತರಕಾರಿ ಬೆಳೆಗಳಿಗೆ ಬೇಡಿಕೆ ಇಲ್ಲದಂತಾಗಿದೆ. ಹೀಗಾಗಿ ತುಕ್ಕಾನಟ್ಟಿಯ ಭಾಗದಲ್ಲಿಯ ಅನೇಕ ತರಕಾರಿ ಬೆಳೆಯುವ ರೈತರ ಪರಿಸ್ಥಿತಿ ಚಿಂತಜನಕವಾಗಿದೆ. ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಸಹ ಅಸಹಾಯಕರಾಗಿದ್ದಾರೆ ಎಂದು ರೈತರು ದೂರುತ್ತಾರೆ.