<p><strong>ಬೆಳಗಾವಿ: </strong>ಇಲ್ಲಿನ ಅನಗೋಳ ಮತ್ತು ಹಲಗಾ ಗ್ರಾಮಗಳ ಜಮೀನುಗಳನ್ನು ನಿವೇಶನವಾಗಿ ಪರಿವರ್ತಿಸಲು ಬುಡಾ (ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ) ರೂಪಿಸಿರುವ ಯೋಜನೆ (ಸ್ಕೀಂ ನಂ. 52) ವಿರೋಧಿಸಿ ರೈತರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.</p>.<p>‘ಬುಡಾದಿಂದ ರೈತರಿಗೆ ನೋಟಿಸ್ ಜಾರಿಗೊಳಿಸಲಾಗಿದೆ. ಫಲವತ್ತಾದ ಮತ್ತು ನಮ್ಮ ಬದುಕಿಗೆ ಆಸರೆಯಾಗಿರುವ ಜಮೀನುಗಳನ್ನು ಬಿಟ್ಟು ಕೊಡಲು ವಿರೋಧವಿದೆ’ ಎಂದು ಅವರು ತಿಳಿಸಿದರು.</p>.<p>‘ಬುಡಾ ನೋಟಿಸ್ಗೆ ಜಗ್ಗುವುದಿಲ್ಲ. ನಿವೇಶನಕ್ಕಾಗಿ ಬೇರೆ ಜಮೀನುಗಳನ್ನು ಪಡೆದುಕೊಳ್ಳಬೇಕು. ನಮ್ಮ ಜಮೀನನ್ನು ಪರಿವರ್ತಿಸಲು ಅವಕಾಶ ಕೊಡುವುದಿಲ್ಲ’ ಎಂದು ಹೇಳಿದರು.</p>.<p>‘ಈ ಜಮೀನುಗಳಲ್ಲಿ ನಾವು ಭತ್ತ, ತರಕಾರಿ ಬೆಳೆದು ಜೀವನ ನಡೆಸುತ್ತಿದ್ದೇವೆ. ಇದನ್ನು ಕಸಿದುಕೊಳ್ಳುವುದು ಸರಿಯಲ್ಲ. ಪ್ರಾಧಿಕಾರ ನಮ್ಮ ಮೇಲೆ ದಬ್ಬಾಳಿಕೆ ನಡೆಸುವುದನ್ನು ಸಹಿಸಲಾಗುವುದಿಲ್ಲ. ಕೂಡಲೇ ಯೋಜನೆಯಿಂದ ಹಿಂದೆ ಸರಿಯಬೇಕು. ಇಲ್ಲವಾದಲ್ಲಿ ಹೋರಾಟ ತೀವ್ರಗೊಳಿಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>ಇಲ್ಲಿನ ಅನಗೋಳ ಮತ್ತು ಹಲಗಾ ಗ್ರಾಮಗಳ ಜಮೀನುಗಳನ್ನು ನಿವೇಶನವಾಗಿ ಪರಿವರ್ತಿಸಲು ಬುಡಾ (ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ) ರೂಪಿಸಿರುವ ಯೋಜನೆ (ಸ್ಕೀಂ ನಂ. 52) ವಿರೋಧಿಸಿ ರೈತರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.</p>.<p>‘ಬುಡಾದಿಂದ ರೈತರಿಗೆ ನೋಟಿಸ್ ಜಾರಿಗೊಳಿಸಲಾಗಿದೆ. ಫಲವತ್ತಾದ ಮತ್ತು ನಮ್ಮ ಬದುಕಿಗೆ ಆಸರೆಯಾಗಿರುವ ಜಮೀನುಗಳನ್ನು ಬಿಟ್ಟು ಕೊಡಲು ವಿರೋಧವಿದೆ’ ಎಂದು ಅವರು ತಿಳಿಸಿದರು.</p>.<p>‘ಬುಡಾ ನೋಟಿಸ್ಗೆ ಜಗ್ಗುವುದಿಲ್ಲ. ನಿವೇಶನಕ್ಕಾಗಿ ಬೇರೆ ಜಮೀನುಗಳನ್ನು ಪಡೆದುಕೊಳ್ಳಬೇಕು. ನಮ್ಮ ಜಮೀನನ್ನು ಪರಿವರ್ತಿಸಲು ಅವಕಾಶ ಕೊಡುವುದಿಲ್ಲ’ ಎಂದು ಹೇಳಿದರು.</p>.<p>‘ಈ ಜಮೀನುಗಳಲ್ಲಿ ನಾವು ಭತ್ತ, ತರಕಾರಿ ಬೆಳೆದು ಜೀವನ ನಡೆಸುತ್ತಿದ್ದೇವೆ. ಇದನ್ನು ಕಸಿದುಕೊಳ್ಳುವುದು ಸರಿಯಲ್ಲ. ಪ್ರಾಧಿಕಾರ ನಮ್ಮ ಮೇಲೆ ದಬ್ಬಾಳಿಕೆ ನಡೆಸುವುದನ್ನು ಸಹಿಸಲಾಗುವುದಿಲ್ಲ. ಕೂಡಲೇ ಯೋಜನೆಯಿಂದ ಹಿಂದೆ ಸರಿಯಬೇಕು. ಇಲ್ಲವಾದಲ್ಲಿ ಹೋರಾಟ ತೀವ್ರಗೊಳಿಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>