‘ಹೆಚ್ಚು ಹಾನಿಗೆ ಒಳಗಾಗಿರುವ ಜಿಲ್ಲೆಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು. ಸಂತ್ರಸ್ತರಿಗೆ ನೆರವಾಗಲು ಸ್ಪಷ್ಟ ನಿರ್ಣಯ ಕೈಗೊಳ್ಳಬೇಕು’ ಎಂದು ಮುಖಂಡರು ಆಗ್ರಹಿಸಿದರು. ಆದರೆ, ಇದಕ್ಕೆ ಸಚಿವರು ಸ್ಪಂದಿಸಲಿಲ್ಲ. ಹೀಗಾಗಿ, ಮುಖಂಡರು ಸಭಾಂಗಣದಲ್ಲಿ ‘ಸರ್ಕಾರಕ್ಕೆ ಶೇಮ್... ಶೇಮ್...’ ಎಂಬಿತ್ಯಾದಿ ಘೋಷಣೆಗಳನ್ನು ಕೂಗಿದರು. ಸಭೆ ವಿಫಲವಾಗಿದೆ ಎಂದು ದೂರಿದರು.