ಉಪವಿಭಾಗಾಧಿಕಾರಿ ಸಭೆ: ‘ರೈತ ಈರಪ್ಪ ಹುಬ್ಬಳ್ಳಿ ಹಾಗೂ ಬ್ಯಾಂಕ್ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದೆ. ಇಬ್ಬರ ಹಿತಾಸಕ್ತಿಯನ್ನು ಗಮನಿಸಿ, ಒನ್ ಟೈಮ್ ಸೆಟ್ಲ್ಮೆಂಟ್ ಯೋಜನೆಯಡಿ ₹ 1.50 ಲಕ್ಷ ಪಾವತಿಸುವಂತೆ ಸಲಹೆ ನೀಡಿದ್ದೆ. ಆಗ ಈರಪ್ಪ ಒಪ್ಪಿಕೊಂಡಿದ್ದರು. ಆದರೆ, ಈಗ ರೈತರು ಏಕೆ ಪ್ರತಿಭಟನೆ ನಡೆಸುತ್ತಿದ್ದಾರೆ ಎನ್ನುವುದು ಗೊತ್ತಿಲ್ಲ’ ಎಂದು ಬೈಲಹೊಂಗಲ ಉಪವಿಭಾಗಾಧಿಕಾರಿ ಶಿವಾನಂದ ಭಜಂತ್ರಿ ಹೇಳಿದರು.