<p><strong>ಬೆಳಗಾವಿ: </strong>ತಾಲ್ಲೂಕಿನ ಹಲಗಾ-ಮಚ್ಚೆ ಬೈಪಾಸ್ ನಿರ್ಮಾಣಕ್ಕೆ ಕೃಷಿ ಜಮೀನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ಇಲ್ಲಿನ ಶಿವಬಸವ ನಗರದಲ್ಲಿರುವ ಉಪ ವಿಭಾಗಾಧಿಕಾರಿ ಹಾಗೂ ರಾಷ್ಟ್ರೀಯ ಹೆದ್ದಾರಿ–4ರ ಅಧಿಕಾರಿಗಳ ಕಚೇರಿಗೆ ರೈತರು ಮಂಗಳವಾರ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.</p>.<p>‘ನಮ್ಮ ಜಮೀನು ನಮಗೆ ಬಿಟ್ಟು ಕೊಡಿ’ ಎಂದು ಅಧಿಕಾರಿಗಳ ಎದುರು ಕೆಲವು ಮಹಿಳೆಯರು ಕಣ್ಣೀರಿಟ್ಟರು.</p>.<p>‘ರಸ್ತೆಗಾಗಿ ಫಲವತ್ತಾದ ಜಮೀನು ಸ್ವಾಧೀನಪಡಿಸಿಕೊಳ್ಳಲಾಗುತ್ತಿದೆ. ಹೋರಾಟ ನಡೆಸಿದ್ದರೂ ಸ್ಪಂದನೆ ದೊರೆತಿಲ್ಲ. ಅಧಿಕಾರಿಗಳು ನಮ್ಮ ಬದುಕಿನೊಂದಿಗೆ ಚೆಲ್ಲಾಟವಾಡುವುದು ಸರಿಯಲ್ಲ’ ಎಂದು ತಿಳಿಸಿದರು.</p>.<p>‘ಜಮೀನು ಕಸಿದುಕೊಂಡರೆ ಸಾಮೂಹಿಕ ಅತ್ಮಹತ್ಯೆ ಮಾಡಿಕೊಳ್ಳಬೇಕಾಗುತ್ತದೆ. ಮುಂದಿನ ಅನಾಹುತಗಳಿಗೆ ಅಧಿಕಾರಿಗಳೇ ಹೊಣೆ ಆಗಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.</p>.<p>ಮುಖಂಡರಾದ ರಾಜು ಮರವೆ, ಹನುಮಂತ ಬಾಳೇಕುಂದ್ರಿ, ಬಿ.ಬಿರ್ಜೆ, ತಾನಾಜಿ ಹಲಗೆಕರ, ಸುಭಾಷ ಲಾಡ, ಯಲ್ಲಪ್ಪ ತಾರಿಹಾಳಕರ, ಗಣಪತ ಜಾಂಗಳೆ, ಜಯಪಾಲ ದೇಸಾಯಿ, ಸಂತೋಷ ಆರೋಂದೇಕರ, ಬಾಳು ಕರಣಕರ, ರೋಹಿತ ಭಾಂದುರ್ಗೆ, ಲಕ್ಷ್ಮಣ ಪವಾರ, ಅಮಿತ ಉದಗಡಗಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>ತಾಲ್ಲೂಕಿನ ಹಲಗಾ-ಮಚ್ಚೆ ಬೈಪಾಸ್ ನಿರ್ಮಾಣಕ್ಕೆ ಕೃಷಿ ಜಮೀನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ಇಲ್ಲಿನ ಶಿವಬಸವ ನಗರದಲ್ಲಿರುವ ಉಪ ವಿಭಾಗಾಧಿಕಾರಿ ಹಾಗೂ ರಾಷ್ಟ್ರೀಯ ಹೆದ್ದಾರಿ–4ರ ಅಧಿಕಾರಿಗಳ ಕಚೇರಿಗೆ ರೈತರು ಮಂಗಳವಾರ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.</p>.<p>‘ನಮ್ಮ ಜಮೀನು ನಮಗೆ ಬಿಟ್ಟು ಕೊಡಿ’ ಎಂದು ಅಧಿಕಾರಿಗಳ ಎದುರು ಕೆಲವು ಮಹಿಳೆಯರು ಕಣ್ಣೀರಿಟ್ಟರು.</p>.<p>‘ರಸ್ತೆಗಾಗಿ ಫಲವತ್ತಾದ ಜಮೀನು ಸ್ವಾಧೀನಪಡಿಸಿಕೊಳ್ಳಲಾಗುತ್ತಿದೆ. ಹೋರಾಟ ನಡೆಸಿದ್ದರೂ ಸ್ಪಂದನೆ ದೊರೆತಿಲ್ಲ. ಅಧಿಕಾರಿಗಳು ನಮ್ಮ ಬದುಕಿನೊಂದಿಗೆ ಚೆಲ್ಲಾಟವಾಡುವುದು ಸರಿಯಲ್ಲ’ ಎಂದು ತಿಳಿಸಿದರು.</p>.<p>‘ಜಮೀನು ಕಸಿದುಕೊಂಡರೆ ಸಾಮೂಹಿಕ ಅತ್ಮಹತ್ಯೆ ಮಾಡಿಕೊಳ್ಳಬೇಕಾಗುತ್ತದೆ. ಮುಂದಿನ ಅನಾಹುತಗಳಿಗೆ ಅಧಿಕಾರಿಗಳೇ ಹೊಣೆ ಆಗಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.</p>.<p>ಮುಖಂಡರಾದ ರಾಜು ಮರವೆ, ಹನುಮಂತ ಬಾಳೇಕುಂದ್ರಿ, ಬಿ.ಬಿರ್ಜೆ, ತಾನಾಜಿ ಹಲಗೆಕರ, ಸುಭಾಷ ಲಾಡ, ಯಲ್ಲಪ್ಪ ತಾರಿಹಾಳಕರ, ಗಣಪತ ಜಾಂಗಳೆ, ಜಯಪಾಲ ದೇಸಾಯಿ, ಸಂತೋಷ ಆರೋಂದೇಕರ, ಬಾಳು ಕರಣಕರ, ರೋಹಿತ ಭಾಂದುರ್ಗೆ, ಲಕ್ಷ್ಮಣ ಪವಾರ, ಅಮಿತ ಉದಗಡಗಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>