ಬುಧುವಾರ ಪಟ್ಟಣದ ಪತ್ರಿಕಾ ಕಾರ್ಯಾಲಯದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪ್ರತಿ ಎಕರೆಗೆ ಕನಿಷ್ಠ ₹ 30 ಸಾವಿರ ಪರಿಹಾರ, ನಿರಂತರ 12 ಗಂಟೆಗಳ ಕಾಲ ವಿದ್ಯುತ್ ಪೂರೈಕೆ, ಪ್ರತಿ ಟನ್ ಕಬ್ಬಿಗೆ ₹ 5500 ಬೆಂಬಲ ಬೆಲೆ, 60 ವರ್ಷದ ವೃದ್ಧ ರೈತರಿಗೆ ₹ 5000 ಮಾಸಾಶನ, ಸಾಲ ಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆ ಜೊತೆಗೆ ಸಕ್ಕರೆ ಇಲಾಖೆ ಮತ್ತು ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಸೇವಕ್ ಸೇರಿ ಎಲ್ಲ ಹುದ್ದೆಗಳನ್ನು ಭರ್ತಿ ಮಾಡುವಂತೆ ಸರ್ಕಾರಕ್ಕೆ ಒತ್ತಾಯಿಸಲಾಗುವುದು’ ಎಂದರು.