‘ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ (ಪಿಕೆಪಿಎಸ್)ಗಳಲ್ಲಿ ₹ 10ಸಾವಿರದಿಂದ ₹ 15ಸಾವಿರ ಸಾಲ ಮನ್ನಾ ಮಾಡಲಾಗಿದೆ. ಹೀಗಾಗಿ, ಬ್ಯಾಂಕ್ಗಳಲ್ಲಿ ಪಡೆದಿರುವ ಸಾಲ ಮನ್ನಾ ಮಾಡಲು ಆಗುವುದಿಲ್ಲ ಎಂದು ಬ್ಯಾಂಕ್ ವ್ಯವಸ್ಥಾಪಕರು ಹೇಳುತ್ತಿದ್ದಾರೆ. ಇದರಿಂದಾಗಿ, ಬಹಳಷ್ಟು ರೈತರಿಗೆ ಯೋಜನೆಯ ಲಾಭ ದೊರೆಯುವುದಿಲ್ಲ. ಅವರ ಸಂಕಷ್ಟ ದೂರಾಗುವುದಿಲ್ಲ’ ಎಂದು ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಬಸವರಾಜ ಕ. ಪಾಟೀಲ ತಿಳಿಸಿದರು.