ಸಂಘದ ರಾಜ್ಯ ಸಂಚಾಲಕಿ ಜಯಶ್ರೀ ಗುರನ್ನವರ, ‘ರಾಜ್ಯ ಸರ್ಕಾರ ಬಂಡವಾಳಶಾಹಿ, ಕಾರ್ಪೊರೇಟ್ ವಲಯ, ರಿಯಲ್ಎಸ್ಟೇಟ್ ದಂಧೆಕೋರರ ಪರವಾಗಿ ಕೆಲಸ ಮಾಡುತ್ತಿದೆ. ಹಸಿರು ಶಾಲು ಹಾಕಿಕೊಂಡು ಅಧಿಕಾರ ಸ್ವೀಕರಿಸುವ ಮುಖ್ಯಮಂತ್ರಿ ಉದ್ಯಮಿಗಳ ಪರವಾಗಿ ಮಾತನಾಡುತ್ತಿದ್ದಾರೆ. ರೈತರ ಕೃಷಿ ಜಮೀನುಗಳನ್ನು ಶ್ರೀಮಂತರ ಪಾಲು ಮಾಡುವುದಕ್ಕಾಗಿ ಕಾಯ್ದೆಗೆ ತಿದ್ದುಪಡಿ ತರಲಾಗಿದೆ. ರೈತರಿಗೆ ಮಾರಕವಾದ ತಿದ್ದುಪಡಿಯನ್ನು ಕೈಬಿಡುವವರೆಗೂ ಹೋರಾಟ ಮುಂದುವರಿಸಲಾಗುವುದು’ ಎಂದು ಹೇಳಿದರು.