ತಾಲ್ಲೂಕಿನ ಹಿರೇಬಾಗೇವಾಡಿ ಟೋಲ್ಗೇಟ್ನಲ್ಲಿ ಭಾರತೀಯ ಕೃಷಿಕ ಸಮಾಜ (ಸಂಯುಕ್ತ) ಅಧ್ಯಕ್ಷ ಸಿದಗೌಡ ಮೋದಗಿ ನೇತೃತ್ವದಲ್ಲಿ 25 ರೈತರು ಒಂದು ತಾಸು ಪುಣೆ–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ತಡೆದರು. ಬಾಯಿ ಬಡಿದುಕೊಂಡು, ರಸ್ತೆಯಲ್ಲಿ ಉರುಳುಸೇವೆ ಮಾಡಿದರು. ಇದರಿಂದಾಗಿ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಯಿತು. ಬಳಿಕ ಅವರನ್ನು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದರು.