<p><strong>ಬೆಳಗಾವಿ</strong>: ಕಬ್ಬು ದರ ನಿಗದಿಗೆ ಒತ್ತಾಯಿಸಿ ಜಿಲ್ಲೆಯ ಗುರ್ಲಾಪುರ ಬಳಿ ಅನಿರ್ದಿಷ್ಟ ಧರಣಿ ನಡೆಸುತ್ತಿದ್ದ ರೈತರು, ಶನಿವಾರ ಸಕ್ಕರೆ ಸಚಿವರ ಮನವಿ ಆಧರಿಸಿ ಪ್ರತಿಭಟನೆಯನ್ನು ವಾಪಸು ಪಡೆದಿದ್ದಾರೆ.</p>.<p>ಧರಣಿ ನಿರತರನ್ನು ಭೇಟಿಯಾದ ಸಚಿವರು, ‘ದರ ಗೊಂದಲಕ್ಕೆ ಕೇಂದ್ರ ಕಾರಣ. ರೈತರ ಮೇಲಿನ ಕಾಳಜಿಗೆ ನಾವು ಏನು ಮಾಡಲು ಸಾಧ್ಯವೋ ಮಾಡಿದ್ದೇವೆ. ಧರಣಿ ಕೈಬಿಡಬೇಕು‘ ಎಂದು ಕೋರಿದರು.</p>.<p>ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಶಶಿಕಾಂತ ಗುರೂಜಿ, ಅಧ್ಯಕ್ಷ ಚೂಣಪ್ಪ ಪೂಜಾರಿ ಧರಣಿ ಕೈಬಿಡಲಾಗಿದೆ ಎಂದು ಪ್ರಕಟಿಸಿದರು.</p>.<p>ಸಂಜೆ ಸಭೆ ನಡೆಸಿದ ಸಂಯುಕ್ತ ಕಿಸಾನ್ ಮೋರ್ಚಾ, ಸಂಯುಕ್ತ ಹೋರಾಟ ಕರ್ನಾಟಕದ (ವಿವಿಧ ಸಂಘಟನೆ) ನಾಯಕರು, ‘ಸರ್ಕಾರ ಘೋಷಿಸಿರುವ ₹3,300 ದರ ಒಪ್ಪುವುದಿಲ್ಲ. ಹೋರಾಟ ತಾತ್ಕಾಲಿಕವಾಗಿ ಅಂತ್ಯವಾಗಿದೆ. ಈ ಬಗ್ಗೆ ಕೇಂದ್ರಕ್ಕೆ ನಿಯೋಗ ಒಯ್ಯಬೇಕು’ ಎಂದು ಒತ್ತಾಯಿಸಿದರು. </p>.<p>ಪರಿಷ್ಕೃತ ದರ, ಆದೇಶ ಪ್ರಕಟ: ಟನ್ ಕಬ್ಬಿಗೆ ನಿಗದಿಪಡಿಸಿದ್ದ ಪರಿಷ್ಕೃತ ದರಕ್ಕೆ ಸಂಬಂಧಿಸಿ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ (ಸಕ್ಕರೆ) ಶನಿವಾರ ಆದೇಶ ಹೊರಡಿಸಿದೆ. ಪರಿಷ್ಕೃತ ದರವು 2025–26ನೇ ಸಾಲಿನ ಹಂಗಾಮಿಗೆ ಅನ್ವಯವಾಗಲಿದೆ ಎಂದು ಆದೇಶ ತಿಳಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ಕಬ್ಬು ದರ ನಿಗದಿಗೆ ಒತ್ತಾಯಿಸಿ ಜಿಲ್ಲೆಯ ಗುರ್ಲಾಪುರ ಬಳಿ ಅನಿರ್ದಿಷ್ಟ ಧರಣಿ ನಡೆಸುತ್ತಿದ್ದ ರೈತರು, ಶನಿವಾರ ಸಕ್ಕರೆ ಸಚಿವರ ಮನವಿ ಆಧರಿಸಿ ಪ್ರತಿಭಟನೆಯನ್ನು ವಾಪಸು ಪಡೆದಿದ್ದಾರೆ.</p>.<p>ಧರಣಿ ನಿರತರನ್ನು ಭೇಟಿಯಾದ ಸಚಿವರು, ‘ದರ ಗೊಂದಲಕ್ಕೆ ಕೇಂದ್ರ ಕಾರಣ. ರೈತರ ಮೇಲಿನ ಕಾಳಜಿಗೆ ನಾವು ಏನು ಮಾಡಲು ಸಾಧ್ಯವೋ ಮಾಡಿದ್ದೇವೆ. ಧರಣಿ ಕೈಬಿಡಬೇಕು‘ ಎಂದು ಕೋರಿದರು.</p>.<p>ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಶಶಿಕಾಂತ ಗುರೂಜಿ, ಅಧ್ಯಕ್ಷ ಚೂಣಪ್ಪ ಪೂಜಾರಿ ಧರಣಿ ಕೈಬಿಡಲಾಗಿದೆ ಎಂದು ಪ್ರಕಟಿಸಿದರು.</p>.<p>ಸಂಜೆ ಸಭೆ ನಡೆಸಿದ ಸಂಯುಕ್ತ ಕಿಸಾನ್ ಮೋರ್ಚಾ, ಸಂಯುಕ್ತ ಹೋರಾಟ ಕರ್ನಾಟಕದ (ವಿವಿಧ ಸಂಘಟನೆ) ನಾಯಕರು, ‘ಸರ್ಕಾರ ಘೋಷಿಸಿರುವ ₹3,300 ದರ ಒಪ್ಪುವುದಿಲ್ಲ. ಹೋರಾಟ ತಾತ್ಕಾಲಿಕವಾಗಿ ಅಂತ್ಯವಾಗಿದೆ. ಈ ಬಗ್ಗೆ ಕೇಂದ್ರಕ್ಕೆ ನಿಯೋಗ ಒಯ್ಯಬೇಕು’ ಎಂದು ಒತ್ತಾಯಿಸಿದರು. </p>.<p>ಪರಿಷ್ಕೃತ ದರ, ಆದೇಶ ಪ್ರಕಟ: ಟನ್ ಕಬ್ಬಿಗೆ ನಿಗದಿಪಡಿಸಿದ್ದ ಪರಿಷ್ಕೃತ ದರಕ್ಕೆ ಸಂಬಂಧಿಸಿ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ (ಸಕ್ಕರೆ) ಶನಿವಾರ ಆದೇಶ ಹೊರಡಿಸಿದೆ. ಪರಿಷ್ಕೃತ ದರವು 2025–26ನೇ ಸಾಲಿನ ಹಂಗಾಮಿಗೆ ಅನ್ವಯವಾಗಲಿದೆ ಎಂದು ಆದೇಶ ತಿಳಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>