ಎತ್ತಿನಹೊಳೆ ಯೋಜನೆಗೆ ಬೇಕಾಗುವ ಜಮೀನನ್ನು ಆಲೂರು, ಬೇಲೂರು, ಅರಸೀಕೆರೆ ತಾಲ್ಲೂಕಿನ ರೈತರಿಂದ ನೇರವಾಗಿ ಖರೀದಿಸಬೇಕು (ಸಕಲೇಶಪುರ ತಾಲ್ಲೂಕಿನ ಮಾಡಿದ ಮಾದರಿಯಲ್ಲಿ). ಮನೆ, ಭೂಮಿ ಕಳೆದುಕೊಂಡವರಿಗೆ ಶೀಘ್ರವೇ ಪುನರ್ವಸತಿ ಕಲ್ಪಿಸಬೇಕು. ಕಾಡಾನೆಗಳ ಹಾವಳಿಯಿಂದ ರೈತರಿಗೆ ಆಗುತ್ತಿರುವ ತೊಂದರೆ, ಹಾನಿ ತಪ್ಪಿಸಲು ಕ್ರಮ ಕೈಗೊಳ್ಳಬೇಕು. ಬೆಳೆ ಹಾನಿ ಅನುಭವಿಸಿದರೆ ತಕ್ಕ ಪರಿಹಾರ ನೀಡಬೇಕು. ಆನೆ ಕಾರಿಡಾರ್ ಸ್ಥಾಪಿಸಬೇಕು ಎಂದು ಒತ್ತಾಯಿಸಿದರು.