ರಾಜ್ಯ ಘಟಕದ ಸಂಚಾಲಕ ಚೂನಪ್ಪ ಪೂಜಾರಿ ಮಾತನಾಡಿ, ‘ಕೇಂದ್ರ ಮತ್ತು ರಾಜ್ಯ ಸರ್ಕಾರ ರೈತ ವಿರೋಧಿ ಕಾನೂನುಗಳಿಂದ ಕುಟುಂಬಗಳು ಬೀದಿಗೆ ಬರುತ್ತಿವೆ. ಕೃಷಿಗೆ ಸಂಬಂಧಿಸಿದ ತಿದ್ದುಪಡಿ ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ಆಗ್ರಹಿಸಿ ದೆಹಲಿಯ ಗಡಿಗಳಲ್ಲಿ ಹೋರಾಟ ಆರಂಭವಾಗಿ ತಿಂಗಳುಗಳೇ ಕಳೆದಿವೆ. ಅದಕ್ಕೆ ಸರ್ಕಾರ ಸ್ಪಂದಿಸಿಲ್ಲ. ಈ ನಡುವೆ, ವಿದ್ಯುತ್ ಖಾಸಗೀಕರಣಕ್ಕೆ ಹೊರಟಿರುವ ಪ್ರಧಾನಿ ನರೇಂದ್ರ ಮೋದಿ ರೈತರ ಸಮಾಧಿ ಮೇಲೆ ರಾಜಕಾರಣ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.