ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯುತ್‌ ಖಾಸಗೀಕರಣಕ್ಕೆ ವಿರೋಧ

Last Updated 9 ಆಗಸ್ಟ್ 2021, 13:16 IST
ಅಕ್ಷರ ಗಾತ್ರ

ಬೆಳಗಾವಿ: ವಿದ್ಯುತ್‌ ಖಾಸಗೀಕರಣಕ್ಕೆ ಪೂರಕವಾಗಿರುವ ವಿದ್ಯುಚ್ಛಕ್ತಿ ಕಾಯ್ದೆ (ತಿದ್ದುಪಡಿ) ಮಸೂದೆ-2021 ವಿರೋಧಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಮುಖಂಡರು ಹಾಗೂ ಕಾರ್ಯಕರ್ತರು ಇಲ್ಲಿನ ರಾಣಿ ಚನ್ನಮ್ಮ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಘಟಕದ ಸಂಚಾಲಕ ಚೂನಪ್ಪ ಪೂಜಾರಿ ಮಾತನಾಡಿ, ‘ಕೇಂದ್ರ ಮತ್ತು ರಾಜ್ಯ ಸರ್ಕಾರ ರೈತ ವಿರೋಧಿ ಕಾನೂನುಗಳಿಂದ ಕುಟುಂಬಗಳು ಬೀದಿಗೆ ಬರುತ್ತಿವೆ. ಕೃಷಿಗೆ ಸಂಬಂಧಿಸಿದ ತಿದ್ದುಪಡಿ ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ಆಗ್ರಹಿಸಿ ದೆಹಲಿಯ ಗಡಿಗಳಲ್ಲಿ ಹೋರಾಟ ಆರಂಭವಾಗಿ ತಿಂಗಳುಗಳೇ ಕಳೆದಿವೆ. ಅದಕ್ಕೆ ಸರ್ಕಾರ ಸ್ಪಂದಿಸಿಲ್ಲ. ಈ ನಡುವೆ, ವಿದ್ಯುತ್ ಖಾಸಗೀಕರಣಕ್ಕೆ ಹೊರಟಿರುವ ಪ್ರಧಾನಿ ನರೇಂದ್ರ ಮೋದಿ ರೈತರ ಸಮಾಧಿ ಮೇಲೆ ರಾಜಕಾರಣ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.

‘ಇದು ರೈತ ವಿರೋಧಿ ಸರ್ಕಾರ. ಕ್ವಿಟ್ ಇಂಡಿಯಾ ಚಳವಳಿಯಂತೆ, ಕಾರ್ಪೊರೇಟ್ ಕಂಪನಿಗಳೇ ದೇಶ ಬಿಟ್ಟು ತೊಲಗಿ ಎಂದು ಹೋರಾಟ ಆರಂಭಿಸುತ್ತೇವೆ’ ಎಂದು ತಿಳಿಸಿದರು.

ಸಂಘಟಕಿ ಜಯಶ್ರೀ ಗುರನ್ನವರ ಮಾತನಾಡಿ, ‘ಬಿಜೆಪಿ ಸರ್ಕಾರವು ಜನವಿರೋಧಿ ನೀತಿಗಳ ಮೂಲಕ ರೈತರು ಮತ್ತು ಜನಸಾಮಾನ್ಯರನ್ನು ಸಂಕಷ್ಟಕ್ಕೆ ದೂಡುತ್ತಿದೆ’ ಎಂದು ದೂರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT