‘ವಿಮಾನನಿಲ್ದಾಣಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು 68 ರೈತರ 38 ಎಕರೆ 34ಗುಂಟೆ ಜಮೀನು ಸ್ವಾಧೀನಪಡಿಸಿಕೊಂಡಿವೆ. ಆದರೆ ಇದುವರೆಗೂ ಹಣ ನೀಡಿಲ್ಲ. ₹ 4.60 ಕೋಟಿ ಬರಬೇಕಾಗಿದೆ. ಆದ್ದರಿಂದ ನಾವು ನ್ಯಾಯಕ್ಕಾಗಿ ನ್ಯಾಯಾಲಯದ ಮೊರೆ ಹೋಗಿದ್ದೆವು. ಅರ್ಜಿ ವಿಚಾರಣೆ ನಡೆಸಿದ ಜಿಲ್ಲಾ 4ನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯವು ಹಣ ನೀಡುವಂತೆ ಆದೇಶಿಸಿದೆ. ಹಣ ಕೊಡದಿದ್ದರೆ ಎಸಿ ಕಚೇರಿಯಲ್ಲಿನ ಪೀಠೋಪಕರಣಗಳನ್ನು ಜಪ್ತಿ ಮಾಡಿಕೊಳ್ಳುವಂತೆ ತಿಳಿಸಿತ್ತು. ಹೀಗಾಗಿ, ವಕೀಲರೊಂದಿಗೆ ಬಂದಿದ್ದೇವೆ’ ಎಂದು ರೈತರು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.