ಬೆಳಗಾವಿ: ಉಪಮುಖ್ಯಮಂತ್ರಿ ಅಥವಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಸದ್ಯದಲ್ಲಿಯೇ ರೈತರ ಸಭೆ ಕರೆದು, ಬೇಡಿಕೆ ಈಡೇರಿಸುವ ಬಗ್ಗೆ ತೀರ್ಮಾನಿಸಲಾಗುವುದೆಂದು ಜಿಲ್ಲಾಧಿಕಾರಿ ಅವರು ನೀಡಿದ ಭರವಸೆಯ ಮೇರೆಗೆ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯು ಅಹೋರಾತ್ರಿ ಪ್ರತಿಭಟನೆಯನ್ನು ಮಂಗಳವಾರ ರಾತ್ರಿ ಹಿಂದಕ್ಕೆ ಪಡೆದಿದೆ.