<p><strong>ಸವದತ್ತಿ (ಬೆಳಗಾವಿ ಜಿಲ್ಲೆ):</strong> ತಾಲ್ಲೂಕಿನ ಮಳಗಲಿ ಗ್ರಾಮದ ಕಾಲುವೆ ಬಳಿ ಇರುವ ಕೃಷಿ ಹೊಂಡದಲ್ಲಿ ಭಾನುವಾರ ಮುಳುಗಿ ತಂದೆ, ಮಗ ಮೃತಪಟ್ಟಿದ್ದಾರೆ.</p><p>ಬಸವರಾಜ ನೀಲಪ್ಪ ಕೆಂಗೇರಿ(40), ಅವರ ಪುತ್ರ ಧರೆಪ್ಪ (14) ಮೃತರು.</p><p>ಬಸವರಾಜ, ಧರೆಪ್ಪ ಮತ್ತು ಭಾಗಪ್ಪ ಸಣ್ಣಕ್ಕಿ (16) ಹುರಳಿ ಬೆಳೆಗೆ ಔಷಧ ಸಿಂಪಡಿಸುತ್ತಿದ್ದರು. ಆಗ ಬಸವರಾಜ ನೀರು ತರಲು ಹೋಗಿ, ಕೃಷಿ ಹೊಂಡದಲ್ಲಿ ಮುಳುಗಿದರು. ಅವರ ರಕ್ಷಣೆಗೆ ಹೋಗಿದ್ದ ಇನ್ನಿಬ್ಬರು ಮುಳುಗಿದ್ದರು.</p><p>ಪಕ್ಕದ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಜನರು ಮೂವರ ರಕ್ಷಣೆಗೆ ಮುಂದಾದರು. ಆದರೆ, ಅಷ್ಟೊತ್ತಿಗೆ ತಂದೆ–ಮಗ ಮೃತಪಟ್ಟಿದ್ದಾರೆ. ಭಾಗಪ್ಪ ಅವರನ್ನು ರಕ್ಷಿಸಿ, ಚಿಕಿತ್ಸೆಗಾಗಿ ಬೈಲಹೊಂಗಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮುರಗೋಡ ಠಾಣೆ ಇನ್ಸ್ಪೆಕ್ಟರ್ ಐ.ಎಂ.ಮಠಪತಿ ‘ಪ್ರಜಾವಾಣಿ’ಗೆ ತಿಳಿಸಿದರು.</p><p>ಮುರಗೋಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸವದತ್ತಿ (ಬೆಳಗಾವಿ ಜಿಲ್ಲೆ):</strong> ತಾಲ್ಲೂಕಿನ ಮಳಗಲಿ ಗ್ರಾಮದ ಕಾಲುವೆ ಬಳಿ ಇರುವ ಕೃಷಿ ಹೊಂಡದಲ್ಲಿ ಭಾನುವಾರ ಮುಳುಗಿ ತಂದೆ, ಮಗ ಮೃತಪಟ್ಟಿದ್ದಾರೆ.</p><p>ಬಸವರಾಜ ನೀಲಪ್ಪ ಕೆಂಗೇರಿ(40), ಅವರ ಪುತ್ರ ಧರೆಪ್ಪ (14) ಮೃತರು.</p><p>ಬಸವರಾಜ, ಧರೆಪ್ಪ ಮತ್ತು ಭಾಗಪ್ಪ ಸಣ್ಣಕ್ಕಿ (16) ಹುರಳಿ ಬೆಳೆಗೆ ಔಷಧ ಸಿಂಪಡಿಸುತ್ತಿದ್ದರು. ಆಗ ಬಸವರಾಜ ನೀರು ತರಲು ಹೋಗಿ, ಕೃಷಿ ಹೊಂಡದಲ್ಲಿ ಮುಳುಗಿದರು. ಅವರ ರಕ್ಷಣೆಗೆ ಹೋಗಿದ್ದ ಇನ್ನಿಬ್ಬರು ಮುಳುಗಿದ್ದರು.</p><p>ಪಕ್ಕದ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಜನರು ಮೂವರ ರಕ್ಷಣೆಗೆ ಮುಂದಾದರು. ಆದರೆ, ಅಷ್ಟೊತ್ತಿಗೆ ತಂದೆ–ಮಗ ಮೃತಪಟ್ಟಿದ್ದಾರೆ. ಭಾಗಪ್ಪ ಅವರನ್ನು ರಕ್ಷಿಸಿ, ಚಿಕಿತ್ಸೆಗಾಗಿ ಬೈಲಹೊಂಗಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮುರಗೋಡ ಠಾಣೆ ಇನ್ಸ್ಪೆಕ್ಟರ್ ಐ.ಎಂ.ಮಠಪತಿ ‘ಪ್ರಜಾವಾಣಿ’ಗೆ ತಿಳಿಸಿದರು.</p><p>ಮುರಗೋಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>