‘ಮಹಾಸಾದ್ವಿ ಹೇಮರೆಡ್ಡಿ ಮಲ್ಲಮ್ಮ, ಮಹಾಯೋಗಿ ವೇಮನ, ವೇಮನಾನಂದ ಸ್ವಾಮೀಜಿ ಅವರ ಆಶೀರ್ವಾದ ರೆಡ್ಡಿ ಸಮಾಜದ ಮೇಲಿದೆ. ಜೊತೆಗೆ ರೆಡ್ಡಿ ಸಮಾಜದಲ್ಲಿ ಕೊಡುವ ಕೈಗಳು ಹೆಚ್ಚಿರುವ ಕಾರಣದಿಂದಭವ್ಯವಾದ ಕಟ್ಟಡ ನಿರ್ಮಿಸಲು ಸಾಧ್ಯವಾಗಿದೆ. ಬೆಳಗಾವಿ ರೆಡ್ಡಿ ಸಂಘದಿಂದ ಸನ್ಮಾನ ಮಾಡಿರುವುದು ನನಗೆ ಜವಾಬ್ದಾರಿ ಹೆಚ್ಚಿಸಿದೆ. ಸಮಾಜ, ಸಂಘದ ಅಭಿವೃದ್ಧಿಗೆ ಸಹಾಯ, ಸಹಕಾರ ನೀಡಲು ಸದಾ ನಿಮ್ಮೊಂದಿಗೆ ಇರುತ್ತೇನೆ’ ಎಂದು ತಿಳಿಸಿದರು.