<p><strong>ಬೆಳಗಾವಿ:</strong> ಕ್ರೀಡಾ ಇಲಾಖೆಯಿಂದ ಕೊಡಮಾಡುವ 2018ನೇ ಸಾಲಿನ ‘ಏಕಲವ್ಯ’ ಪ್ರಶಸ್ತಿಗೆ ಭಾಜನವಾದ ಜುಡೋ ಪಟು ಗೀತಾ ದಾನಪ್ಪಗೋಳ ಅವರನ್ನು ಕೆಎಲ್ಇ ಸಂಸ್ಥೆ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಅವರು ಇಲ್ಲಿನ ಲಿಂಗರಾಜ ಕಾಲೇಜಿನಲ್ಲಿ ಸಂಸ್ಥೆ ಪರವಾಗಿ ಶನಿವಾರ ಗೌರವಿಸಿದರು.</p>.<p>ಗೋಕಾಕ ತಾಲ್ಲೂಕು ನಾಗನೂರದ ಗೀತಾ ಅವರನ್ನುಸಂಸ್ಥೆಯು ಮೂರು ವರ್ಷಗಳಿಂದ ದತ್ತು ಪಡೆದು, ಆರ್ಥಿಕ ನೆರವಿನ ಜೊತೆಗೆ ತರಬೇತಿ ನೀಡುತ್ತಿದೆ.</p>.<p>‘ಯುವತಿಯರು ಕ್ರೀಡೆಯತ್ತ ಹೆಚ್ಚಿನ ಆಸಕ್ತಿ ಹೊಂದುತ್ತಿರುವುದು ಹೆಮ್ಮೆಯ ವಿಷಯ. ಗೀತಾ ಭರವಸೆಯ ಕ್ರೀಡಾಪಟು. ಗ್ರಾಮೀಣ ಪರಿಸರದಿಂದ ಬಂದರೂ ದೊಡ್ಡ ಸಾಧನೆ ಮಾಡಿದ್ದಾರೆ. ಕಡುಬಡತನದಲ್ಲಿ ಗೀತಾ ಸವಾಲುಗಳನ್ನು ಸ್ವೀಕರಿಸಿ ಯುವತಿಯರಿಗೆ ಸ್ಫೂರ್ತಿಯಾಗಿದ್ದಾರೆ. ಅವರು ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಿನ ಸಾಧನೆ ಮಾಡಲಿ. ಈ ನಿಟ್ಟಿನಲ್ಲಿ ಸಂಸ್ಥೆಯು ಎಲ್ಲ ರೀತಿಯ ಸಹಾಯ ನೀಡಲಿದೆ’ ಎಂದು ಕೋರೆ ತಿಳಿಸಿದರು.</p>.<p>ಲಿಂಗರಾಜ ಕಾಲೇಜಿನ ಪ್ರಾಚಾರ್ಯ ಡಾ.ಆರ್.ಎಂ. ಪಾಟೀಲ, ಎಂ.ಆರ್. ಬನಹಟ್ಟಿ, ಪಿಯು ಪ್ರಾಚಾರ್ಯೆ ಗಿರಿಜಾ ಹಿರೇಮಠ, ದೈಹಿಕ ಶಿಕ್ಷಣ ನಿರ್ದೇಶಕಡಾ.ಸಿ.ರಾಮರಾವ್ ಹಾಗೂ ಸಿಬ್ಬಂದಿ ಇದ್ದರು.</p>.<p>ಡಾ.ಮಹೇಶ ಗುರನಗೌಡರ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ಕ್ರೀಡಾ ಇಲಾಖೆಯಿಂದ ಕೊಡಮಾಡುವ 2018ನೇ ಸಾಲಿನ ‘ಏಕಲವ್ಯ’ ಪ್ರಶಸ್ತಿಗೆ ಭಾಜನವಾದ ಜುಡೋ ಪಟು ಗೀತಾ ದಾನಪ್ಪಗೋಳ ಅವರನ್ನು ಕೆಎಲ್ಇ ಸಂಸ್ಥೆ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಅವರು ಇಲ್ಲಿನ ಲಿಂಗರಾಜ ಕಾಲೇಜಿನಲ್ಲಿ ಸಂಸ್ಥೆ ಪರವಾಗಿ ಶನಿವಾರ ಗೌರವಿಸಿದರು.</p>.<p>ಗೋಕಾಕ ತಾಲ್ಲೂಕು ನಾಗನೂರದ ಗೀತಾ ಅವರನ್ನುಸಂಸ್ಥೆಯು ಮೂರು ವರ್ಷಗಳಿಂದ ದತ್ತು ಪಡೆದು, ಆರ್ಥಿಕ ನೆರವಿನ ಜೊತೆಗೆ ತರಬೇತಿ ನೀಡುತ್ತಿದೆ.</p>.<p>‘ಯುವತಿಯರು ಕ್ರೀಡೆಯತ್ತ ಹೆಚ್ಚಿನ ಆಸಕ್ತಿ ಹೊಂದುತ್ತಿರುವುದು ಹೆಮ್ಮೆಯ ವಿಷಯ. ಗೀತಾ ಭರವಸೆಯ ಕ್ರೀಡಾಪಟು. ಗ್ರಾಮೀಣ ಪರಿಸರದಿಂದ ಬಂದರೂ ದೊಡ್ಡ ಸಾಧನೆ ಮಾಡಿದ್ದಾರೆ. ಕಡುಬಡತನದಲ್ಲಿ ಗೀತಾ ಸವಾಲುಗಳನ್ನು ಸ್ವೀಕರಿಸಿ ಯುವತಿಯರಿಗೆ ಸ್ಫೂರ್ತಿಯಾಗಿದ್ದಾರೆ. ಅವರು ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಿನ ಸಾಧನೆ ಮಾಡಲಿ. ಈ ನಿಟ್ಟಿನಲ್ಲಿ ಸಂಸ್ಥೆಯು ಎಲ್ಲ ರೀತಿಯ ಸಹಾಯ ನೀಡಲಿದೆ’ ಎಂದು ಕೋರೆ ತಿಳಿಸಿದರು.</p>.<p>ಲಿಂಗರಾಜ ಕಾಲೇಜಿನ ಪ್ರಾಚಾರ್ಯ ಡಾ.ಆರ್.ಎಂ. ಪಾಟೀಲ, ಎಂ.ಆರ್. ಬನಹಟ್ಟಿ, ಪಿಯು ಪ್ರಾಚಾರ್ಯೆ ಗಿರಿಜಾ ಹಿರೇಮಠ, ದೈಹಿಕ ಶಿಕ್ಷಣ ನಿರ್ದೇಶಕಡಾ.ಸಿ.ರಾಮರಾವ್ ಹಾಗೂ ಸಿಬ್ಬಂದಿ ಇದ್ದರು.</p>.<p>ಡಾ.ಮಹೇಶ ಗುರನಗೌಡರ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>