ಸೋಮವಾರ, 14 ಜುಲೈ 2025
×
ADVERTISEMENT
ADVERTISEMENT

ಬೆಳಗಾವಿ | ಚಳಿಜ್ವರ: ಜಿಲ್ಲೆಯ ಎಲ್ಲ ಸರ್ಕಾರಿ, ಖಾಸಗಿ ಆಸ್ಪತ್ರೆಗಳು ಭರ್ತಿ

Published : 1 ಜನವರಿ 2024, 8:52 IST
Last Updated : 1 ಜನವರಿ 2024, 8:52 IST
ಫಾಲೋ ಮಾಡಿ
Comments
ನಮ್ಮೂರಿನಲ್ಲಿ ಹಲವು ಜನರಿಗೆ ಶೀತ ಕೆಮ್ಮು ಜ್ವರ ಕಾಣಸಿಕೊಂಡಿದೆ. ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರೋಗಿಗಳೇ ತುಂಬಿದ್ದಾರೆ. ಜಿಲ್ಲಾ ಆರೋಗ್ಯಾಧಿಕಾರಿಗಳು ಜಾಗೃತಿ ಕಾರ್ಯಕ್ರಮ ಮಾಡಬೇಕು
ಶ್ರೀಮಂತ ಪಾಟೀಲ ನಿವಾಸಿ ಹಾರೂಗೊಪ್ಪ
ಹಳ್ಳಿಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಕೊಳಚೆ ನೀರು ನಿಲ್ಲದಂತೆ ಸೊಳ್ಳೆಗಳು ಉತ್ಪತ್ತಿಯಾಗದಂತೆ ನೋಡಿಕೊಳ್ಳಬೇಕು. ಕ್ರಿಮಿನಾಶಕ ಸಿಂಪಡಿಸಬೇಕು
ಭಾವನಾ ಜೋಡೆತ್ತಿನ ನೆಹರೂ ನಗರ ಬೆಳಗಾವಿ
ದಿನವೂ 300 ಮಂದಿ ತಪಾಸಣೆ
‘ಜಿಲ್ಲೆಯಲ್ಲಿ ಜೆಎನ್‌–1 ಕೋವಿಡ್‌ ಲಕ್ಷಣಗಳು ಇದೂವರೆಗೆ ಯಾರಲ್ಲೂ ಕಂಡುಬಂದಿಲ್ಲ. ಒಬ್ಬ ವ್ಯಕ್ತಿಗೆ ವಾರದ ಹಿಂದೆ ಸಾಮಾನ್ಯ ಕೋವಿಡ್‌ ಪಾಸಿಟಿವ್‌ ಬಂದಿತ್ತು. ಅವರನ್ನು ಈಗಾಗಲೇ ಐಸೋಲೇಷನ್‌ ಮಾಡಲಾಗಿದೆ. ನೆರೆಯ ರಾಜ್ಯದಿಂದ ಪ್ರವಾಸಿಗರು ಹೆಚ್ಚಾಗಿ ಬರುತ್ತಾರೆ. ಅಲ್ಲಿಯೂ ತಪಾಸಣೆಗೆ ವ್ಯವಸ್ಥೆ ಮಾಡಲಾಗಿದೆ. ಆದರೆ ಸೋಂಕುಗಳು ಕಂಡುಬಂದಿಲ್ಲ. ಪ್ರತಿದಿನ ಕನಿಷ್ಠ 300 ಮಂದಿ ಶಂಕಿತ ಕೋವಿಡ್‌ ರೋಗಿಗಳನ್ನು ತಪಾಸಣೆ ಮಾಡಲಾಗುತ್ತಿದೆ’ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಹೇಶ ಕೋಣೆ ತಿಳಿಸಿದ್ದಾರೆ. ಬಿಮ್ಸ್‌ ಜಿಲ್ಲಾ ಆಸ್ಪತ್ರೆ ಕೆಎಲ್‌ಇಎಸ್‌ ಆಸ್ಪತ್ರೆ ಡಯಗ್ನಾಸ್ಟಿಕ್‌ ಸೆಂಟರ್‌ ಸೇರಿ ನಾಲ್ಕು ವಿಆರ್‌ಡಿಎಲ್‌ (ವೈರಸ್‌ ರಿಸರ್ಜ್ ಅಂಡ್‌ ಡಯಾಗ್ನಾಸ್ಟಿಕ್‌ ಲ್ಯಾಬ್‌) ಪ್ರಯೋಗಾಲಯಗಳು ಇವೆ. ವೈರಾಣು ಪರೀಕ್ಷೆ ನಿರಂತರವಾಗಿ ಸಾಗಿದೆ ಎಂದೂ ಅವರು ಹೇಳಿದ್ದಾರೆ.
ಬೆಚ್ಚಗಿರುವುದು ಮುಖ್ಯ: ಡಾ.ಜ್ಯೋತಿ
ಚಳಿಗಾಲದಲ್ಲಿ ವೈರಾಣುಗಳು ಕ್ರಿಯಾಶೀಲವಾಗುತ್ತವೆ. ಸಹಜವಾಗಿಯೇ ಕೆಮ್ಮು ಶೀತ ಜ್ವರ ಫ್ಲೂ ಸೇರಿದಂತೆ ಶ್ವಾಸಕೋಶಕ್ಕೆ ಸಂಬಂಧಿಸಿದ ಹಲವು ಕಾಯಿಲೆಗಳು ಬರುತ್ತವೆ. ಇದರಿಂದ ಪಾರಾಗಲು ಜನರು ಯಾವಾಗಲೂ ಆರೋಗ್ಯವನ್ನು ಬೆಚ್ಚಗೆ ಇಟ್ಟುಕೊಳ್ಳಬೇಕು. ಕಾಯಿಲೆ ಬಂದ ಮೇಲೆ ಔಷಧೋಪಚಾರ ಮಾಡಿಕೊಳ್ಳುವ ಬದಲು ಮುಂಚಿತವಾಗಿಯೇ ಜಾಗ್ರತೆ ವಹಿಸಬೇಕು ಎಂದು ಕೆಎಲ್‌ಇ ಸಂಸ್ಥೆಯ ಡಾ.ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ಸಂಶೊಧನಾ ಕೇಂದ್ರದ ಶ್ವಾಸಕೋಶ ತಜ್ಞೆ ಜೆಎನ್‌ಎಂಸಿಯ ಅಸೋಸಿಯೇಟ್‌ ಪ್ರೊಫೆಸರ್‌ ಡಾ.ಜ್ಯೋತಿ ಹಟ್ಟಿಹೊಳಿ ಸಲಹೆ ನೀಡಿದ್ದಾರೆ. ರೋಗನಿರೋಧಕ ಶಕ್ತಿ ವೃದ್ಧಿಸಿಕೊಳ್ಳಬೇಕು. ಬಿಸಿಯಾದ ಊಟ ನೀರು ಬಳಸಬೇಕು. ಬೆಚ್ಚಗಿನ ಬಟ್ಟೆ ಹಾಕಿಕೊಳ್ಳಬೇಕು. ಚಿಕ್ಕ ಮಕ್ಕಳು ಹಾಗೂ ವೃದ್ಧರಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಇರುವ ಕಾರಣ ಬೇಗ ಸೋಂಕಿಗೆ ಒಳಗಾಗುತ್ತಾರೆ. ಅಂಥವರ ಬಗ್ಗೆ ಕಾಳಜಿ ವಹಿಸಬೇಕು. ಆಯಾ ಕಾಲಕ್ಕೆ ತಕ್ಕಂತೆ ಲಸಿಕೆಗಳೂ ಇವೆ. ಅಗತ್ಯವಿದ್ದವರು ಮುಂಜಾಗ್ರತೆಯಿಂದ ಲಸಿಕೆ ಪಡೆದುಕೊಳ್ಳಬೇಕು ಎಂದೂ ಅವರು ತಿಳಿಸಿದ್ದಾರೆ. ಎಲ್ಲಕ್ಕಿಂತ ಮುಖ್ಯವಾಗಿ ಜನಸಂದಣಿಯಲ್ಲಿ ಭಾಗವಹಿಸಬಾರದು. ಯಾರಿಗೇ ಸೋಂಕು ಇದ್ದರೂ ಎಲ್ಲರಿಗೂ ತಗಲುತ್ತದೆ. ಯಾರಿಗಾದರೂ ಶೀತ ಜ್ವರಗಳು ಇದ್ದರೆ ತಮ್ಮನ್ನು ತಾವು ‘ಐಸೋಲೇಟ್‌’ ಮಾಡಿಕೊಳ್ಳಬೇಕು ಎಂದೂ ಡಾ.ಜ್ಯೋತಿ ಕಿವಿಮಾತು ಹೇಳಿದ್ದಾರೆ.
ಕುಸಿದ ತಾಪಮಾನ
ಬೆಳಗಾವಿಯಲ್ಲಿ ಡಿ.31ರವರೆಗೂ ವಾಡಿಕೆಯಂತೆ ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್‌ ಇರಬೇಕು. ಆದರೆ ವಾಯುಭಾರ ಕುಸಿತದಿಂದ ಈ ವರ್ಷ ಕನಿಷ್ಠ ತಾಪಮಾನ 12ರಿಂದ 14 ಡಿಗ್ರಿ ಸೆಲ್ಸಿಯಸ್‌ಗೆ ಕುಸಿದಿದೆ. ಗರಿಷ್ಠ ತಾಪಮಾನ ಕೂಡ ಸರಾಸರಿ 30ಕ್ಕೆ ಇಳಿದಿದೆ. ಇದರಿಂದ ಆರೋಗ್ಯದಲ್ಲಿ ಏರುಪೇರಾಗುವುದು ಸಹಜ ಎಂದು ಇಂಡಿಯನ್‌ ಮೆಟ್ರಾಲಾಜಿಕಲ್‌ ವಿಭಾಗ ಮುನ್ಸೂಚನೆ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT