<p><strong>ಮುಗಳಖೋಡ</strong>: ‘ಮಾಳಿ ಮಾಲಗಾರ ಸಮಾಜದ ಅಭಿವೃದ್ಧಿಗೆ ಪ್ರತ್ಯೇಕ ನಿಗಮ ಸ್ಥಾಪನೆ ಮಾಡುವವರೆಗೆ ನಾವು ಹೋರಾಟ ಮಾಡುತ್ತೇವೆ. ರಾಜಕೀಯ ಮರೆತು ಪಕ್ಷಾತೀತವಾಗಿ ಕೈ ಜೋಡಿಸುತ್ತೇವೆ’ ಎಂದು ಮಾಳಿ ಮಾಲಗಾರ ಸಮಾಜದ ನಿಯೋಗದ ಅಧ್ಯಕ್ಷ ಸಿ.ಬಿ.ಕುಲಿಗೋಡ ಹೇಳಿದರು.</p>.<p>ಪಟ್ಟಣದಲ್ಲಿ ಈಚೆಗೆ ನಡೆದ ಮಾಳಿ-ಮಾಲಗಾರ ಸಮಾಜದಲ್ಲಿ ಚುನಾಯಿತ ಪ್ರತಿನಿಧಿಗಳ ಸತ್ಕಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಿಗಮಕ್ಕಾಗಿ ಬೆಂಗಳೂರಿನಲ್ಲಿ ಉಪವಾಸ ಸತ್ಯಾಗ್ರಹಕ್ಕೂ ಸಿದ್ಧ ಎಂದರು.</p>.<p>ಸಾಹಿತಿ ವಿ.ಎಸ್.ಮಾಳಿ, ರಾಜ್ಯ ಘಟಕದ ಅಧ್ಯಕ್ಷ ಕಾಡು ಮಾಳಿ ಮಾತನಾಡಿದರು. ವಿವಿಧ ಗ್ರಾಮ ಪಂಚಾಯಿತಿಗಳು ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳಿಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾದವರಿಗೆ ಸತ್ಕರಿಸಲಾಯಿತು. ಪ್ರೊ.ಪ್ರಕಾಶ ಕಂಬಾರ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.</p>.<p>ಅಪ್ಪಸಾಬ್ ಕುಲಿಗುಡೆ ಹಾಗೂ ಸಮಾಜದ ಮುಖಂಡರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಗಳಖೋಡ</strong>: ‘ಮಾಳಿ ಮಾಲಗಾರ ಸಮಾಜದ ಅಭಿವೃದ್ಧಿಗೆ ಪ್ರತ್ಯೇಕ ನಿಗಮ ಸ್ಥಾಪನೆ ಮಾಡುವವರೆಗೆ ನಾವು ಹೋರಾಟ ಮಾಡುತ್ತೇವೆ. ರಾಜಕೀಯ ಮರೆತು ಪಕ್ಷಾತೀತವಾಗಿ ಕೈ ಜೋಡಿಸುತ್ತೇವೆ’ ಎಂದು ಮಾಳಿ ಮಾಲಗಾರ ಸಮಾಜದ ನಿಯೋಗದ ಅಧ್ಯಕ್ಷ ಸಿ.ಬಿ.ಕುಲಿಗೋಡ ಹೇಳಿದರು.</p>.<p>ಪಟ್ಟಣದಲ್ಲಿ ಈಚೆಗೆ ನಡೆದ ಮಾಳಿ-ಮಾಲಗಾರ ಸಮಾಜದಲ್ಲಿ ಚುನಾಯಿತ ಪ್ರತಿನಿಧಿಗಳ ಸತ್ಕಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಿಗಮಕ್ಕಾಗಿ ಬೆಂಗಳೂರಿನಲ್ಲಿ ಉಪವಾಸ ಸತ್ಯಾಗ್ರಹಕ್ಕೂ ಸಿದ್ಧ ಎಂದರು.</p>.<p>ಸಾಹಿತಿ ವಿ.ಎಸ್.ಮಾಳಿ, ರಾಜ್ಯ ಘಟಕದ ಅಧ್ಯಕ್ಷ ಕಾಡು ಮಾಳಿ ಮಾತನಾಡಿದರು. ವಿವಿಧ ಗ್ರಾಮ ಪಂಚಾಯಿತಿಗಳು ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳಿಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾದವರಿಗೆ ಸತ್ಕರಿಸಲಾಯಿತು. ಪ್ರೊ.ಪ್ರಕಾಶ ಕಂಬಾರ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.</p>.<p>ಅಪ್ಪಸಾಬ್ ಕುಲಿಗುಡೆ ಹಾಗೂ ಸಮಾಜದ ಮುಖಂಡರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>