ಬಸವ ಭೀಮ ಸೇನೆ ಅಧ್ಯಕ್ಷ ಆರ್.ಎಸ್. ದರ್ಗೆ, ನೇಗಿನಹಾಳದ ಬಸವ ಸಿದ್ಧಲಿಂಗ ಸ್ವಾಮೀಜಿ ಹಾಗೂ ಕಲಬುರ್ಗಿಯ ಅಕ್ಕಮಹಾದೇವಿ ಆಶ್ರಮದ ಪ್ರಭುಶ್ರೀ ತಾಯಿ ಸಾನ್ನಿಧ್ಯ ವಹಿಸಿದ್ದರು. ಬಸವ ಪ್ರತಿಷ್ಠಾನದ ಅಧ್ಯಕ್ಷ ಬಸವರಾಜ ರೊಟ್ಟಿ, ರಾಷ್ಟ್ರೀಯ ಬಸವ ಸೇನೆ ಅಧ್ಯಕ್ಷ ಶಂಕರ ಗುಡಸ, ಮಾಧ್ಯಮಿಕ ಶಿಕ್ಷಕರ ಸಂಘದ ರಾಜ್ಯ ಘಟಕದ ಉಪಾಧ್ಯಕ್ಷ ರಾಮು ಗುಗವಾಡ, ಹೋರಾಟಗಾರ ಅಡಿವೇಶ ಇಟಗಿ, ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡಾದ, ರೈತ ಮುಖಂಡ ಸಿದಗೌಡ ಮೋದಗಿ ಮಾತನಾಡಿದರು. ಜಾಗತಿಕ ಲಿಂಗಾಯತ ಮಹಾಸಭಾದ ಅಧ್ಯಕ್ಷ ಅರವಿಂದ ಪರುಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.