<p><strong>ಸಂಕೇಶ್ವರ:</strong> ಕೆರೆಗಳನ್ನು ತುಂಬುವುದರಿಂದ ಭೂಮಿಯಲ್ಲಿ ನೀರಿನ ಮಟ್ಟ ಹೆಚ್ಚಳವಾಗುತ್ತದೆ. ಇದರಿಂದ ರೈತರಿಗೆ ಅನುಕೂಲವಾಗಲಿದೆ ಎಂದು ಶಾಸಕ ನಿಖಿಲ ಕತ್ತಿ ಹೇಳಿದರು.</p>.<p>ಸೋಮವಾರ ಸಂಕೇಶ್ವರದ ಹಿರಣ್ಯಕೇಶಿ ನದಿಯಿಂದ ಕೆರೆಗಳಿಗೆ ನೀರು ತುಂಬಿಸುವ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ಸಂಕೇಶ್ವರದ ಬಳಿ ಹರಿಯುವ ಹಿರಣ್ಯಕೇಶಿ ನದಿಯಿಂದ ಹುಕ್ಕೇರಿ ತಾಲೂಕಿನ 22 ಕೆರೆಗಳಿಗೆ ಹಾಗೂ ಚಿಕ್ಕೋಡಿ ತಾಲೂಕಿನ 11 ಕೆರೆಗಳಿಗೆ ಕಳೆದ 5 ವರ್ಷಗಳಿಂದ ನೀರು ತುಂಬಿಸಲಾಗುತ್ತಿದೆ. ಇದರಿಂದ ಭೂಮಿಯಲ್ಲಿ ನೀರಿನ ಮಟ್ಟವು ಹೆಚ್ದಾಗುತ್ತಿದೆ. ಈ ಹಿಂದೆ ಬೋರವೆಲ್ಗಳಿಗೆ ನೀರು ಬರಬೇಕಾದರೆ 800 ಅಡಿ ಕೊರೆಯಬೇಕಾಗಿತ್ತು. ಆದರೆ ಈಗ ಕೆರೆಗಳಿಗೆ ನೀರು ತುಂಬಿಸುತ್ತಿರುವುದರಿಂದ ಭೂಮಿಯಲ್ಲಿ ನೀರಿನ ಮಟ್ಟವು ಹೆಚ್ಚಳವಾಗಿದೆ. ಹೀಗಾಗಿ ಈಗ 300 ಅಡಿಗಳಿಗೆ ನೀರು ಸಿಗುತ್ತಿದೆ’ ಎಂದು ಅವರು ಹೇಳಿದರು.</p>.<p>ಹಿರಣ್ಯಕೇಶಿ ನದಿಗೆ ಅಡ್ಡಲಾಗಿ ಹೊಸದಾಗಿ 4 ಕಡೆ ಬಾಂದಾರ ನಿರ್ಮಾಣಕ್ಕೆ ₹ 60 ಕೋಟಿ ಹಣ ಮಂಜೂರಾಗಿದೆ. ಇದರಿಂದ ವರ್ಷದ 12 ತಿಂಗಳೂ ನದಿಯಲ್ಲಿ ನೀರು ಲಭಿಸಲಿದ್ದು ಜನ, ಜಾನುವಾರು ಹಾಗೂ ಭೂಮಿಗೆ ಅನುಕೂಲವಾಗಲಿದೆ ಎಂದು ಅವರು ಹೇಳಿದರು.</p>.<p>ಹಿರಿಯ ಸಹಕಾರಿ ಧುರೀಣರಾದ ಕೆ.ಬಿ. ಪಾಟೀಲ, ಗಜಾನನ ಕ್ವಳ್ಳಿ, ಸಂಜಯ ಶಿರಕೋಳಿ, ಅಮರ ನಲವಡೆ, ಶ್ರೀಕಾಂತ ಹತನೂರೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಂಕೇಶ್ವರ:</strong> ಕೆರೆಗಳನ್ನು ತುಂಬುವುದರಿಂದ ಭೂಮಿಯಲ್ಲಿ ನೀರಿನ ಮಟ್ಟ ಹೆಚ್ಚಳವಾಗುತ್ತದೆ. ಇದರಿಂದ ರೈತರಿಗೆ ಅನುಕೂಲವಾಗಲಿದೆ ಎಂದು ಶಾಸಕ ನಿಖಿಲ ಕತ್ತಿ ಹೇಳಿದರು.</p>.<p>ಸೋಮವಾರ ಸಂಕೇಶ್ವರದ ಹಿರಣ್ಯಕೇಶಿ ನದಿಯಿಂದ ಕೆರೆಗಳಿಗೆ ನೀರು ತುಂಬಿಸುವ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ಸಂಕೇಶ್ವರದ ಬಳಿ ಹರಿಯುವ ಹಿರಣ್ಯಕೇಶಿ ನದಿಯಿಂದ ಹುಕ್ಕೇರಿ ತಾಲೂಕಿನ 22 ಕೆರೆಗಳಿಗೆ ಹಾಗೂ ಚಿಕ್ಕೋಡಿ ತಾಲೂಕಿನ 11 ಕೆರೆಗಳಿಗೆ ಕಳೆದ 5 ವರ್ಷಗಳಿಂದ ನೀರು ತುಂಬಿಸಲಾಗುತ್ತಿದೆ. ಇದರಿಂದ ಭೂಮಿಯಲ್ಲಿ ನೀರಿನ ಮಟ್ಟವು ಹೆಚ್ದಾಗುತ್ತಿದೆ. ಈ ಹಿಂದೆ ಬೋರವೆಲ್ಗಳಿಗೆ ನೀರು ಬರಬೇಕಾದರೆ 800 ಅಡಿ ಕೊರೆಯಬೇಕಾಗಿತ್ತು. ಆದರೆ ಈಗ ಕೆರೆಗಳಿಗೆ ನೀರು ತುಂಬಿಸುತ್ತಿರುವುದರಿಂದ ಭೂಮಿಯಲ್ಲಿ ನೀರಿನ ಮಟ್ಟವು ಹೆಚ್ಚಳವಾಗಿದೆ. ಹೀಗಾಗಿ ಈಗ 300 ಅಡಿಗಳಿಗೆ ನೀರು ಸಿಗುತ್ತಿದೆ’ ಎಂದು ಅವರು ಹೇಳಿದರು.</p>.<p>ಹಿರಣ್ಯಕೇಶಿ ನದಿಗೆ ಅಡ್ಡಲಾಗಿ ಹೊಸದಾಗಿ 4 ಕಡೆ ಬಾಂದಾರ ನಿರ್ಮಾಣಕ್ಕೆ ₹ 60 ಕೋಟಿ ಹಣ ಮಂಜೂರಾಗಿದೆ. ಇದರಿಂದ ವರ್ಷದ 12 ತಿಂಗಳೂ ನದಿಯಲ್ಲಿ ನೀರು ಲಭಿಸಲಿದ್ದು ಜನ, ಜಾನುವಾರು ಹಾಗೂ ಭೂಮಿಗೆ ಅನುಕೂಲವಾಗಲಿದೆ ಎಂದು ಅವರು ಹೇಳಿದರು.</p>.<p>ಹಿರಿಯ ಸಹಕಾರಿ ಧುರೀಣರಾದ ಕೆ.ಬಿ. ಪಾಟೀಲ, ಗಜಾನನ ಕ್ವಳ್ಳಿ, ಸಂಜಯ ಶಿರಕೋಳಿ, ಅಮರ ನಲವಡೆ, ಶ್ರೀಕಾಂತ ಹತನೂರೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>