<p><strong>ಬೆಳಗಾವಿ: </strong>‘ಕೋವಿಡ್- 19 ಹಿನ್ನೆಲೆಯಲ್ಲಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಅಗಸರು ಮತ್ತು ಕ್ಷೌರಿಕರಿಗೆ ಸರ್ಕಾರ ಘೋಷಿಸಿರುವ ₹ 5 ಸಾವಿರ ನೆರವನ್ನು ಯಾವುದೇ ವಿಳಂಬವಿಲ್ಲದೇ ಅರ್ಹರಿಗೆ ತಕ್ಷಣ ಒದಗಿಸಲು ಕ್ರಮಕೈಗೊಳ್ಳಬೇಕು’ ಎಂದು ಕಾರ್ಮಿಕ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಕಟ್ಟುನಿಟ್ಟಿನ ಸೂಚನೆ ನೀಡಿದರು.</p>.<p>ಇಲ್ಲಿನ ತಮ್ಮ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ ನಡೆಸಿದ ಜಿಲ್ಲಾಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘ಸರ್ಕಾರದ ನೆರವು ಪಡೆಯಲು ಅಗತ್ಯವಿರುವ ವೃತ್ತಿ ದೃಢೀಕರಣ ಪತ್ರವನ್ನು ನೀಡಲು ವಿನಾಕಾರಣ ವಿಳಂಬ ಮಾಡುವ ಸ್ಥಳೀಯ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಕೆ ನೀಡಿದರು.</p>.<p><strong>ಲೈಸೆನ್ಸ್ ಕಡ್ಡಾಯವಲ್ಲ:</strong>‘ಸರ್ಕಾರದ ನೆರವು ಪಡೆಯಲು ವೃತ್ತಿ ಲೈಸೆನ್ಸ್ ಕಡ್ಡಾಯವಲ್ಲ. ಸೇವಾಸಿಂಧು ಪೋರ್ಟಲ್ನಲ್ಲಿ ಅರ್ಜಿ<br />ಸಲ್ಲಿಸಲು ಇದೇ ತಿಂಗಳ 30 ಕಡೆಯ ದಿನವಾಗಿದೆ. ವೃತ್ತಿಯ ಲೈಸೆನ್ಸ್ ಇಲ್ಲವೆಂಬ ಕಾರಣಕ್ಕೆ ವೃತ್ತಿಯ ದೃಢೀಕರಣ ಪತ್ರ ನೀಡಲು ಯಾವುದೇ ಕಾರಣಕ್ಕೂ ನಿರಾಕರಿಸಬಾರದು’ ಎಂದು ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>‘ಸೇವಾಸಿಂಧು ಪೋರ್ಟಲ್ನಲ್ಲೇ ಆನ್ಲೈನ್ ಅರ್ಜಿ ಸಲ್ಲಿಸಬೇಕಿರುವುದರಿಂದ ಮುದ್ರಿತ ಅರ್ಜಿಗಳನ್ನು<br />ಯಾವುದೇ ಕಾರಣಕ್ಕೂ ಸ್ವೀಕರಿಸಬಾರದು. ವೃತ್ತಿಯ ದೃಢೀಕರಣ ಪ್ರಮಾಣಪತ್ರದ ನಮೂನೆಯನ್ನು ಮಾತ್ರ ಎಲ್ಲರಿಗೂ ಸುಲಭವಾಗಿ ಲಭಿಸುವಂತೆ ಹೆಚ್ಚಿನ ಸಂಖ್ಯೆಯಲ್ಲಿ ಮುದ್ರಿಸಿ ಎಲ್ಲರಿಗೂ ತಲುಪಿಸಲು ಕ್ರಮ ಕೈಗೊಳ್ಳಬೇಕು’ ಎಂದು ಹೇಳಿದರು.</p>.<p>ಉಪ ಕಾರ್ಮಿಕ ಆಯುಕ್ತ ವೆಂಕಟೇಶ ಶಿಂಧಿಹಟ್ಟಿ ಮಾತನಾಡಿ, ‘ಸರ್ಕಾರದ ನೆರವು ಪಡೆಯಲು ಕಡ್ಡಾಯವಾಗಿ ಸೇವಾಸಿಂಧು ಮೂಲಕ ಅರ್ಜಿ ಸಲ್ಲಿಸಬೇಕು. ಜಾತಿಯ ಬದಲು ವೃತ್ತಿ ಆಧಾರಿತವಾಗಿ ಸರ್ಕಾರ ನೆರವು ನೀಡುತ್ತಿದೆ. ಅಗತ್ಯ ದಾಖಲೆಗಳ ಸಮೇತ ಅರ್ಜಿ ಸಲ್ಲಿಸಬೇಕು’ ಎಂದು ತಿಳಿಸಿದರು.</p>.<p>‘ಉದ್ಯೋಗ ಪ್ರಮಾಣ ಪತ್ರವನ್ನು ಕಾರ್ಮಿಕ ಅಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಕಂದಾಯ ಅಧಿಕಾರಿ<br />ಅಥವಾ ನಿರೀಕ್ಷಕರು, ಗ್ರಾಮ ಪಂಚಾಯ್ತಿ ಕಾರ್ಯದರ್ಶಿಗಳು ಪ್ರಮಾಣಪತ್ರ ನೀಡಲಿದ್ದಾರೆ. ನಂತರ ಡಿಬಿಟಿ ಮೂಲಕ ನೇರವಾಗಿ ಅರ್ಜಿದಾರರ ಖಾತೆಗೆ ಹಣ ಸಂದಾಯವಾಗಲಿದೆ’ ಎಂದರು.</p>.<p>‘ಜಿಲ್ಲೆಯಲ್ಲಿ ಇದುವರೆಗೆ 1226 ಕ್ಷೌರಿಕರು ಮತ್ತು 311 ಅಗಸರು ಈಗಾಗಲೇ ಅರ್ಜಿ ಸಲ್ಲಿಸಿದ್ದಾರೆ. ಉಳಿದವರು ಕೂಡ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು’ ಎಂದು ತಿಳಿಸಿದರು.</p>.<p>ಅರ್ಜಿಯ ಜತೆಗೆ ಕಡ್ಡಾಯವಾಗಿ ಕೆಲವರು ಲೈಸೆನ್ಸ್ ಕೇಳುತ್ತಿರುವುದರಿಂದ ಅರ್ಜಿ ಸಲ್ಲಿಸಲು ವಿಳಂಬವಾಗುತ್ತಿದೆ ಈ ಬಗ್ಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಹಡಪದ ಸಮಾಜದ ಮುಖಂಡರು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿಕೊಂಡರು.</p>.<p>ಮಹಾನಗರ ಪಾಲಿಕೆ ಆಯುಕ್ತ ಜಗದೀಶ್ ಕೆ.ಎಚ್., ಸಹಾಯಕ ಕಾರ್ಮಿಕ ಆಯುಕ್ತ ಡಿ.ಜಿ.ನಾಗೇಶ್, ಕಾರ್ಮಿಕ ಇಲಾಖೆಯ ಅಧಿಕಾರಿಗಳಾದ ತರನ್ನುಮ್, ಮಲ್ಲಿಕಾರ್ಜುನ ಜೋಗೂರ ಮತ್ತಿತರ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. ಅಗಸರ ಮತ್ತು ಕ್ಷೌರಿಕ ಸಮಾಜದ ಮುಖಂಡರು ಸಭೆಯಲ್ಲಿ ಪಾಲ್ಗೊಂಡು ಸಲಹೆಗಳನ್ನು ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>‘ಕೋವಿಡ್- 19 ಹಿನ್ನೆಲೆಯಲ್ಲಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಅಗಸರು ಮತ್ತು ಕ್ಷೌರಿಕರಿಗೆ ಸರ್ಕಾರ ಘೋಷಿಸಿರುವ ₹ 5 ಸಾವಿರ ನೆರವನ್ನು ಯಾವುದೇ ವಿಳಂಬವಿಲ್ಲದೇ ಅರ್ಹರಿಗೆ ತಕ್ಷಣ ಒದಗಿಸಲು ಕ್ರಮಕೈಗೊಳ್ಳಬೇಕು’ ಎಂದು ಕಾರ್ಮಿಕ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಕಟ್ಟುನಿಟ್ಟಿನ ಸೂಚನೆ ನೀಡಿದರು.</p>.<p>ಇಲ್ಲಿನ ತಮ್ಮ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ ನಡೆಸಿದ ಜಿಲ್ಲಾಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘ಸರ್ಕಾರದ ನೆರವು ಪಡೆಯಲು ಅಗತ್ಯವಿರುವ ವೃತ್ತಿ ದೃಢೀಕರಣ ಪತ್ರವನ್ನು ನೀಡಲು ವಿನಾಕಾರಣ ವಿಳಂಬ ಮಾಡುವ ಸ್ಥಳೀಯ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಕೆ ನೀಡಿದರು.</p>.<p><strong>ಲೈಸೆನ್ಸ್ ಕಡ್ಡಾಯವಲ್ಲ:</strong>‘ಸರ್ಕಾರದ ನೆರವು ಪಡೆಯಲು ವೃತ್ತಿ ಲೈಸೆನ್ಸ್ ಕಡ್ಡಾಯವಲ್ಲ. ಸೇವಾಸಿಂಧು ಪೋರ್ಟಲ್ನಲ್ಲಿ ಅರ್ಜಿ<br />ಸಲ್ಲಿಸಲು ಇದೇ ತಿಂಗಳ 30 ಕಡೆಯ ದಿನವಾಗಿದೆ. ವೃತ್ತಿಯ ಲೈಸೆನ್ಸ್ ಇಲ್ಲವೆಂಬ ಕಾರಣಕ್ಕೆ ವೃತ್ತಿಯ ದೃಢೀಕರಣ ಪತ್ರ ನೀಡಲು ಯಾವುದೇ ಕಾರಣಕ್ಕೂ ನಿರಾಕರಿಸಬಾರದು’ ಎಂದು ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>‘ಸೇವಾಸಿಂಧು ಪೋರ್ಟಲ್ನಲ್ಲೇ ಆನ್ಲೈನ್ ಅರ್ಜಿ ಸಲ್ಲಿಸಬೇಕಿರುವುದರಿಂದ ಮುದ್ರಿತ ಅರ್ಜಿಗಳನ್ನು<br />ಯಾವುದೇ ಕಾರಣಕ್ಕೂ ಸ್ವೀಕರಿಸಬಾರದು. ವೃತ್ತಿಯ ದೃಢೀಕರಣ ಪ್ರಮಾಣಪತ್ರದ ನಮೂನೆಯನ್ನು ಮಾತ್ರ ಎಲ್ಲರಿಗೂ ಸುಲಭವಾಗಿ ಲಭಿಸುವಂತೆ ಹೆಚ್ಚಿನ ಸಂಖ್ಯೆಯಲ್ಲಿ ಮುದ್ರಿಸಿ ಎಲ್ಲರಿಗೂ ತಲುಪಿಸಲು ಕ್ರಮ ಕೈಗೊಳ್ಳಬೇಕು’ ಎಂದು ಹೇಳಿದರು.</p>.<p>ಉಪ ಕಾರ್ಮಿಕ ಆಯುಕ್ತ ವೆಂಕಟೇಶ ಶಿಂಧಿಹಟ್ಟಿ ಮಾತನಾಡಿ, ‘ಸರ್ಕಾರದ ನೆರವು ಪಡೆಯಲು ಕಡ್ಡಾಯವಾಗಿ ಸೇವಾಸಿಂಧು ಮೂಲಕ ಅರ್ಜಿ ಸಲ್ಲಿಸಬೇಕು. ಜಾತಿಯ ಬದಲು ವೃತ್ತಿ ಆಧಾರಿತವಾಗಿ ಸರ್ಕಾರ ನೆರವು ನೀಡುತ್ತಿದೆ. ಅಗತ್ಯ ದಾಖಲೆಗಳ ಸಮೇತ ಅರ್ಜಿ ಸಲ್ಲಿಸಬೇಕು’ ಎಂದು ತಿಳಿಸಿದರು.</p>.<p>‘ಉದ್ಯೋಗ ಪ್ರಮಾಣ ಪತ್ರವನ್ನು ಕಾರ್ಮಿಕ ಅಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಕಂದಾಯ ಅಧಿಕಾರಿ<br />ಅಥವಾ ನಿರೀಕ್ಷಕರು, ಗ್ರಾಮ ಪಂಚಾಯ್ತಿ ಕಾರ್ಯದರ್ಶಿಗಳು ಪ್ರಮಾಣಪತ್ರ ನೀಡಲಿದ್ದಾರೆ. ನಂತರ ಡಿಬಿಟಿ ಮೂಲಕ ನೇರವಾಗಿ ಅರ್ಜಿದಾರರ ಖಾತೆಗೆ ಹಣ ಸಂದಾಯವಾಗಲಿದೆ’ ಎಂದರು.</p>.<p>‘ಜಿಲ್ಲೆಯಲ್ಲಿ ಇದುವರೆಗೆ 1226 ಕ್ಷೌರಿಕರು ಮತ್ತು 311 ಅಗಸರು ಈಗಾಗಲೇ ಅರ್ಜಿ ಸಲ್ಲಿಸಿದ್ದಾರೆ. ಉಳಿದವರು ಕೂಡ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು’ ಎಂದು ತಿಳಿಸಿದರು.</p>.<p>ಅರ್ಜಿಯ ಜತೆಗೆ ಕಡ್ಡಾಯವಾಗಿ ಕೆಲವರು ಲೈಸೆನ್ಸ್ ಕೇಳುತ್ತಿರುವುದರಿಂದ ಅರ್ಜಿ ಸಲ್ಲಿಸಲು ವಿಳಂಬವಾಗುತ್ತಿದೆ ಈ ಬಗ್ಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಹಡಪದ ಸಮಾಜದ ಮುಖಂಡರು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿಕೊಂಡರು.</p>.<p>ಮಹಾನಗರ ಪಾಲಿಕೆ ಆಯುಕ್ತ ಜಗದೀಶ್ ಕೆ.ಎಚ್., ಸಹಾಯಕ ಕಾರ್ಮಿಕ ಆಯುಕ್ತ ಡಿ.ಜಿ.ನಾಗೇಶ್, ಕಾರ್ಮಿಕ ಇಲಾಖೆಯ ಅಧಿಕಾರಿಗಳಾದ ತರನ್ನುಮ್, ಮಲ್ಲಿಕಾರ್ಜುನ ಜೋಗೂರ ಮತ್ತಿತರ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. ಅಗಸರ ಮತ್ತು ಕ್ಷೌರಿಕ ಸಮಾಜದ ಮುಖಂಡರು ಸಭೆಯಲ್ಲಿ ಪಾಲ್ಗೊಂಡು ಸಲಹೆಗಳನ್ನು ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>