ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ: ವಿವಿಧ ಕಾಯಿಲೆಗಳಿಂದ ಬಳಲುತ್ತಿರುವ 14 ಜನರ ಚಿಕಿತ್ಸೆಗೆ ಲಕ್ಷ್ಮಿ ನೆರವು

Last Updated 2 ಅಕ್ಟೋಬರ್ 2021, 15:01 IST
ಅಕ್ಷರ ಗಾತ್ರ

ಬೆಳಗಾವಿ: ವಿವಿಧ ಕಾಯಿಲೆಗಳಿಂದ ಬಳಲುತ್ತಿರುವ ಗ್ರಾಮೀಣ ವಿಧಾನಸಭಾ ಕ್ಷೇತ್ರದ 14 ಜನರಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಅವರು ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ₹ 7.15 ಲಕ್ಷ ಮಂಜೂರು ಮಾಡಿಸಿದ್ದಾರೆ.

ಆಸ್ಪತ್ರೆಯ ವೆಚ್ಚವನ್ನು ಭರಿಸಲಾಗದೆ ನೆರವು ಕೋರಿ ಹಲವರು ಹೆಬ್ಬಾಳಕರ ಅವರನ್ನು ಸಂಪರ್ಕಿಸಿದ್ದರು. ಪರಿಹಾರ ನಿಧಿಯಿಂದ ಹಣ ಮಂಜೂರು ಮಾಡುವಂತೆ ಶಿಫಾರಸು ಮಾಡಿದ್ದರು. ಆದೇಶಪತ್ರವನ್ನು ಫಲಾನುಭವಿಗಳಿಗೆ ಶನಿವಾರ ವಿತರಿಸಿದರು. ‘ವೈಯಕ್ತಿಕವಾಗಿಯೂ ಸಹಾಯ ಮಾಡಿದ್ದೇನೆ’ ಎಂದು ತಿಳಿಸಿದರು.

ಎಪಿಎಂಸಿ ಅಧ್ಯಕ್ಷ ಯುವರಾಜ ಕದಂ, ಮುಖಂಡರಾದ ಚನ್ನರಾಜ ಹಟ್ಟಿಹೊಳಿ ಮತ್ತು ಮೃಣಾಲ ಹೆಬ್ಬಾಳಕರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT