ಬೆಳಗಾವಿ: ಕರ್ನಾಟಕದ ಬೆಳಗಾವಿ, ನಿಪ್ಪಾಣಿ, ಕಾರವಾರ, ಬೀದರ್, ಭಾಲ್ಕಿ ಪ್ರದೇಶವನ್ನು ಮಹಾರಾಷ್ಟ್ರಕ್ಕೆ ಸೇರಿಸಿದ ರೀತಿಯ ವಿವಾದಿತ ನಕ್ಷೆ ಮತ್ತು ಗ್ರಾಫಿಕ್ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಈಚೆಗೆ ಪೋಸ್ಟ್ ಹಾಕಿ, ಭಾಷಾ ಸಾಮರಸ್ಯ ಕದಡುವ ಪ್ರಯತ್ನ ನಡೆಸಿದ್ದ ಇಲ್ಲಿನ ಮಹಾರಾಷ್ಟ್ರ ಏಕೀಕರಣ ಸಮಿತಿಯ (ಎಂಇಎಸ್) ಯುವ ಘಟಕದ ಅಧ್ಯಕ್ಷ ಶುಭಂ ಶೆಳಕೆ ವಿರುದ್ಧ ನಗರದ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.