ಈ ಪ್ರದೇಶ ಸದಾ ಜನದಟ್ಟಣೆಯಿಂದ ಕೂಡಿರುತ್ತದೆ. ನೂರಾರು ಜನರು ವ್ಯಾಪಾರ ವಹಿವಾಟು ಕೈಗೊಳ್ಳುತ್ತಾರೆ. ಬೆಂಕಿ ಅವಘಡ ಸಂಭವಿಸಿದ ಕಾರಣ, ಪೊಲೀಸರು ಕೆಲಹೊತ್ತು ಜನಸಂಚಾರ ತಡೆದರು. ಮುನ್ನೆಚ್ಚರಿಕೆ ಕ್ರಮವಾಗಿ ವಿದ್ಯುತ್ ಸಂಪರ್ಕವನ್ನೂ ಕಡಿತಗೊಳಿಸಲಾಗಿತ್ತು. ಕೆಲವು ವ್ಯಾಪಾರಸ್ಥರು ಅಂಗಡಿಗಳನ್ನು ಮುಚ್ಚಿ, ರಕ್ಷಣಾ ಕಾರ್ಯಾಚರಣೆಗೆ ನೆರವಾದರು.