<p><strong>ಗೋಕಾಕ:</strong> ‘ಜಲ ಸಂಪನ್ಮೂಲಗಳ ಸುರಕ್ಷತೆ, ರಕ್ಷಣೆ, ಸ್ವಚ್ಛತೆ ಮತ್ತು ನಿರ್ವಹಣಾ ಕ್ರಮಗಳನ್ನು ಅನುಸರಿಸುವ ಕುರಿತು ಹಿರೇನಂದಿ ಗ್ರಾಮ ಪಂಚಾಯಿತಿ ಜಲ ಸರಬರಾಜು ವಿಭಾಗದ ಮುಖ್ಯಸ್ಥ ಗಂಗಯ್ಯ ಹಿರೇಮಠ ವಿವರಿಸಿದರು.</p>.<p>ತಾಲ್ಲೂಕಿನ ಹಿರೇನಂದಿ ಗ್ರಾಮದಲ್ಲಿ ಅರಭಾವಿಯ ಕಿತ್ತೂರು ರಾಣಿ ಚನ್ನಮ್ಮ ತೋಟಗಾರಿಕಾ ಮಹಾವಿದ್ಯಾಲಯ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಅಡಿ ಹಮ್ಮಿಕೊಳ್ಳಲಾಗಿದ್ದ ಎನ್.ಎಸ್.ಎಸ್. ಶಿಬಿರದ ನಾಲ್ಕನೇ ದಿನದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಎನ್.ಎಸ್.ಎಸ್. ವಿಭಾಗದ ಅಧಿಕಾರಿ ಪ್ರವೀಣಕುಮಾರ, ಪ್ರತಿಕ್ಷಾ ಹಾಗೂ ರಾಘವೇಂದ್ರ ಕೆ.ಎಸ್. ಮಾತನಾಡಿದರು.</p>.<p>‘ಜಲ ಸಂಪನ್ಮೂಲ ಸಂರಕ್ಷಣೆ’ ವಿಷಯದ ಕುರಿತು ಪ್ರಿಯಾಂಕಾ ಎಂ.ಕೆ. ಉಪನ್ಯಾಸ ನೀಡಿದರು. ಸ್ವಯಂ ಸೇವಕಿ ಸವಿತಾ ಕಾರ್ಯಕ್ರಮ ನಿರ್ವಹಿಸಿದರು. ಮಣಿಕಂಠ ವಂದಿಸಿದರು.</p>.<p>ಅಗ್ನಿಶಾಮಕ ದಳದಿಂದ ಗ್ರಾಮದ ಕನಕದಾಸ ವೃತ್ತದಲ್ಲಿ ಅಗ್ನಿ ಅವಘಡಗಳನ್ನು ನಿರ್ವಹಿಸುವ ಕುರಿತು ಪ್ರಾತ್ಯಕ್ಷಿಕೆ ನಡೆಯಿತು. ಗೃಹಿಣಿಯರು ಮನೆಯಲ್ಲಿ ಅಡುಗೆ ಗ್ಯಾಸ್ ಸಿಲಿಂಡರ್ ಬಳಕೆ ಕುರಿತು ಮಾಹಿತಿ ನೀಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೋಕಾಕ:</strong> ‘ಜಲ ಸಂಪನ್ಮೂಲಗಳ ಸುರಕ್ಷತೆ, ರಕ್ಷಣೆ, ಸ್ವಚ್ಛತೆ ಮತ್ತು ನಿರ್ವಹಣಾ ಕ್ರಮಗಳನ್ನು ಅನುಸರಿಸುವ ಕುರಿತು ಹಿರೇನಂದಿ ಗ್ರಾಮ ಪಂಚಾಯಿತಿ ಜಲ ಸರಬರಾಜು ವಿಭಾಗದ ಮುಖ್ಯಸ್ಥ ಗಂಗಯ್ಯ ಹಿರೇಮಠ ವಿವರಿಸಿದರು.</p>.<p>ತಾಲ್ಲೂಕಿನ ಹಿರೇನಂದಿ ಗ್ರಾಮದಲ್ಲಿ ಅರಭಾವಿಯ ಕಿತ್ತೂರು ರಾಣಿ ಚನ್ನಮ್ಮ ತೋಟಗಾರಿಕಾ ಮಹಾವಿದ್ಯಾಲಯ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಅಡಿ ಹಮ್ಮಿಕೊಳ್ಳಲಾಗಿದ್ದ ಎನ್.ಎಸ್.ಎಸ್. ಶಿಬಿರದ ನಾಲ್ಕನೇ ದಿನದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಎನ್.ಎಸ್.ಎಸ್. ವಿಭಾಗದ ಅಧಿಕಾರಿ ಪ್ರವೀಣಕುಮಾರ, ಪ್ರತಿಕ್ಷಾ ಹಾಗೂ ರಾಘವೇಂದ್ರ ಕೆ.ಎಸ್. ಮಾತನಾಡಿದರು.</p>.<p>‘ಜಲ ಸಂಪನ್ಮೂಲ ಸಂರಕ್ಷಣೆ’ ವಿಷಯದ ಕುರಿತು ಪ್ರಿಯಾಂಕಾ ಎಂ.ಕೆ. ಉಪನ್ಯಾಸ ನೀಡಿದರು. ಸ್ವಯಂ ಸೇವಕಿ ಸವಿತಾ ಕಾರ್ಯಕ್ರಮ ನಿರ್ವಹಿಸಿದರು. ಮಣಿಕಂಠ ವಂದಿಸಿದರು.</p>.<p>ಅಗ್ನಿಶಾಮಕ ದಳದಿಂದ ಗ್ರಾಮದ ಕನಕದಾಸ ವೃತ್ತದಲ್ಲಿ ಅಗ್ನಿ ಅವಘಡಗಳನ್ನು ನಿರ್ವಹಿಸುವ ಕುರಿತು ಪ್ರಾತ್ಯಕ್ಷಿಕೆ ನಡೆಯಿತು. ಗೃಹಿಣಿಯರು ಮನೆಯಲ್ಲಿ ಅಡುಗೆ ಗ್ಯಾಸ್ ಸಿಲಿಂಡರ್ ಬಳಕೆ ಕುರಿತು ಮಾಹಿತಿ ನೀಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>