‘ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ನಮಗೆ ಈಗಲೂ ನಾಯಕ. ದಿನವೂ 2 ಬಾರಿ ಅವರೊಂದಿಗೆ ಮಾತನಾಡುತ್ತೇನೆ. ಆದರೆ, ಪಕ್ಷದ ವಿಚಾರ ಬಂದಾಗ ಪ್ರಾಮಾಣಿಕ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ. 2023ರ ಚುನಾವಣೆಯಲ್ಲೂ ಬಿಜೆಪಿ ಸರ್ಕಾರ ರಚನೆಗೆ ದೃಢ ಸಂಕಲ್ಪ ಮಾಡಿದ್ದೇವೆ. ಅತಿ ಶೀಘ್ರವೇ ಮುಖ್ಯಮಂತ್ರಿ ಆಹ್ವಾನಿಸಿ ದೊಡ್ಡ ಸಮಾವೇಶ ನಡೆಸಲಾಗುವುದು. ಗ್ರಾಮೀಣ ಕ್ಷೇತ್ರದಲ್ಲಿ ಬಿಜೆಪಿಯ ವಿಜಯ ಪತಾಕೆ ಹಾರಿಸಲಾಗುವುದು’ ಎಂದರು.