ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೈಲಹೊಂಗಲ | ಅಖಂಡ ಭಾರತ ಸಂಕಲ್ಪ ದಿನ: ವಿಹಿಂಪದಿಂದ ಪಂಜಿನ ಮೆರವಣಿಗೆ

Published 14 ಆಗಸ್ಟ್ 2023, 4:11 IST
Last Updated 14 ಆಗಸ್ಟ್ 2023, 4:11 IST
ಅಕ್ಷರ ಗಾತ್ರ

ಬೈಲಹೊಂಗಲ: ಪಟ್ಟಣದ ವಿಶ್ವಹಿಂದೂ ಪರಿಷತ್ ಹಾಗೂ ಬಜರಂಗದಳ ತಾಲ್ಲೂಕು ಘಟಕದಿಂದ ಆಗಸ್ಟ್ 14ರ ಮಧ್ಯರಾತ್ರಿ 12 ಗಂಟೆಗೆ ಅಖಂಡ ಭಾರತ ಸಂಕಲ್ಪ ದಿನ ಆಚರಣೆ ಹಾಗೂ ಪಂಜಿನ ಮೆರವಣಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ರಾತ್ರಿ 9.30ಕ್ಕೆ ಕಿತ್ತೂರ ಚನ್ನಮ್ಮ ಸಮಾಧಿ ಸ್ಥಳದಿಂದ ಸಂಗೊಳ್ಳಿ ರಾಯಣ್ಣ ವೃತ್ತ ಮಾರ್ಗವಾಗಿ ಬಜಾರ ರಸ್ತೆಯ ಉಪ್ಪಿನ ಕೂಟ ವರದಾಂಜನೇಯ ದೇವಸ್ಥಾನದವರೆಗೆ ಪಂಜಿನ ಮೆರವಣಿಗೆ ನಡೆಯಲಿದೆ.

ಎಲ್ಲ ದೇಶಾಭಿಗಳು ಭಾಗವಹಿಸಬೇಕು ಎಂದು ವಿಶ್ವಹಿಂದೂ ಪರಿಷತ್ ಜಿಲ್ಲಾ ಮುಖಂಡ ಪ್ರಮೋದಕುಮಾರ ವಕ್ಕುಂದಮಠ, ತಾಲ್ಲೂಕು ಘಟಕದ ಅಧ್ಯಕ್ಷ ಕಾಶಿನಾಥ ಬಿರಾದಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT