ವಿಧಾನಮಂಡಲ ಅಧಿವೇಶನಕ್ಕೆ ಬರುವ ಮುಖ್ಯಮಂತ್ರಿ, ಸಚಿವರು, ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರಿಗೆ ಸ್ವಾಗತ ಕೋರುವುದಕ್ಕಾಗಿ ಮುಖಂಡರು ಫ್ಲೆಕ್ಸ್ಗಳನ್ನು ಹಾಕಿಸಿದ್ದಾರೆ. ನಗರದ ಪ್ರಮುಖ ರಸ್ತೆಗಳಲ್ಲಿ ಹಾಗೂ ಪುಣೆ–ಬೆಂಗಳೂರು ಹೆದ್ದಾರಿಯಲ್ಲಿ ಜೆಡಿಎಸ್ ಮುಖಂಡ, ಜಿಲ್ಲಾ ಪಂಚಾಯ್ತಿ ಸದಸ್ಯ ಶಂಕರ ಮಾಡಲಗಿ ಹಾಗೂ ಆ ಪಕ್ಷದ ಕೆಲವು ಮುಖಂಡರು ಬಹಳಷ್ಟು ಫ್ಲೆಕ್ಸ್ಗಳನ್ನು ಹಾಕಿಸಿದ್ದಾರೆ. ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಹಾಗೂ ಕಾಂಗ್ರೆಸ್ನಿಂದ ಸ್ವಾಗತ ಕೋರುವ ಫ್ಲೆಕ್ಸ್ಗಳನ್ನು ಅಲ್ಲಲ್ಲಿ ಹಾಕಲಾಗಿದೆ. ಇದರಲ್ಲಿ ಬಿಜೆಪಿ ಮುಖಂಡರು ಕೂಡ ಹಿಂದೆ ಬಿದ್ದಿಲ್ಲ. ಇದರಿಂದ ನಗರದ ಸಹಜ ಸೌಂದರ್ಯಕ್ಕೆ ಧಕ್ಕೆಯಾಗಿದೆ.