ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿಯಿಂದ ಚೆನ್ನೈಗೆ ವಿಮಾನ ಪುನರಾರಂಭ

Last Updated 26 ಸೆಪ್ಟೆಂಬರ್ 2020, 4:00 IST
ಅಕ್ಷರ ಗಾತ್ರ

ಬೆಳಗಾವಿ: ಬೆಳಗಾವಿಯಿಂದ ಮೈಸೂರು ಮಾರ್ಗವಾಗಿ ಚೆನ್ನೈಗೆ ವಿಮಾನ ಹಾರಾಟ ಅ.1ರಿಂದ ಆರಂಭಗೊಳ್ಳಲಿದೆ ಎಂದು ಸಾಂಬ್ರಾ ವಿಮಾನ ನಿಲ್ದಾಣ ನಿರ್ದೇಶಕ ರಾಜೇಶ್ ಕುಮಾರ್ ಮೌರ್ಯ ತಿಳಿಸಿದ್ದಾರೆ.

ಟ್ರೂಜೆಟ್ ಕಂಪನಿಯ ವಿಮಾನವು ವಾರದಲ್ಲಿ ಮೂರು ದಿನಗಳು ಅಂದರೆ ಮಂಗಳವಾರ, ಗುರುವಾರ ಹಾಗೂ ಶನಿವಾರ ಮೈಸೂರು ಮೂಲಕ ಚೆನ್ನೈಗೆ ಹಾರಾಡಲಿದೆ. ತಾಂತ್ರಿಕ ತೊಂದರೆಯಿಂದ ಈ ಮಾರ್ಗದಲ್ಲಿ ಹಾರಾಟವನ್ನು ಸ್ಥಗಿತಗೊಳಿಸಲಾಗಿತ್ತು. ಇದೀಗ ಪುನರಾರಂಭಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ಬೆಳಗಾವಿ ಜಿಲ್ಲೆಯಲ್ಲೂ ಮಳೆ

ಬೆಳಗಾವಿ ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಶುಕ್ರವಾರ ತಡರಾತ್ರಿಯಿಂದಲೂ ಜಿಟಿಜಿಟಿ ಮಳೆಯಾಗುತ್ತಿದೆ.

ತಾಲ್ಲೂಕಿನ ಹಿರೇಬಾಗೇವಾಡಿ ಸೇರಿದಂತೆ ವಿವಿಧೆಡೆ, ಚಿಕ್ಕೋಡಿ, ಬೈಲಹೊಂಗಲ, ಕೌಜಲಗಿ, ಗೋಕಾಕ, ಮುನವಳ್ಳಿ ಪ್ರದೇಶದಲ್ಲಿ ಮಳೆ ಆಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT