ಬೆಳಗಾವಿ: ಬೆಳಗಾವಿಯಿಂದ ಮೈಸೂರು ಮಾರ್ಗವಾಗಿ ಚೆನ್ನೈಗೆ ವಿಮಾನ ಹಾರಾಟ ಅ.1ರಿಂದ ಆರಂಭಗೊಳ್ಳಲಿದೆ ಎಂದು ಸಾಂಬ್ರಾ ವಿಮಾನ ನಿಲ್ದಾಣ ನಿರ್ದೇಶಕ ರಾಜೇಶ್ ಕುಮಾರ್ ಮೌರ್ಯ ತಿಳಿಸಿದ್ದಾರೆ.
ಟ್ರೂಜೆಟ್ ಕಂಪನಿಯ ವಿಮಾನವು ವಾರದಲ್ಲಿ ಮೂರು ದಿನಗಳು ಅಂದರೆ ಮಂಗಳವಾರ, ಗುರುವಾರ ಹಾಗೂ ಶನಿವಾರ ಮೈಸೂರು ಮೂಲಕ ಚೆನ್ನೈಗೆ ಹಾರಾಡಲಿದೆ. ತಾಂತ್ರಿಕ ತೊಂದರೆಯಿಂದ ಈ ಮಾರ್ಗದಲ್ಲಿ ಹಾರಾಟವನ್ನು ಸ್ಥಗಿತಗೊಳಿಸಲಾಗಿತ್ತು. ಇದೀಗ ಪುನರಾರಂಭಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
ಬೆಳಗಾವಿ ಜಿಲ್ಲೆಯಲ್ಲೂ ಮಳೆ
ಬೆಳಗಾವಿ ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಶುಕ್ರವಾರ ತಡರಾತ್ರಿಯಿಂದಲೂ ಜಿಟಿಜಿಟಿ ಮಳೆಯಾಗುತ್ತಿದೆ.
ತಾಲ್ಲೂಕಿನ ಹಿರೇಬಾಗೇವಾಡಿ ಸೇರಿದಂತೆ ವಿವಿಧೆಡೆ, ಚಿಕ್ಕೋಡಿ, ಬೈಲಹೊಂಗಲ, ಕೌಜಲಗಿ, ಗೋಕಾಕ, ಮುನವಳ್ಳಿ ಪ್ರದೇಶದಲ್ಲಿ ಮಳೆ ಆಗುತ್ತಿದೆ.