<p><strong>ಮೂಡಲಗಿ (ಬೆಳಗಾವಿ ಜಿಲ್ಲೆ): </strong>ಸತತ ಮಳೆಯಿಂದಾಗಿ ಎರಡು ದಿನಗಳಿಂದ ಘಟಪ್ರಭಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ತಾಲ್ಲೂಕಿನ ಮಸಗುಪ್ಪಿ ಗ್ರಾಮವು ಸಂಪೂರ್ಣ ಜಲಾವೃತಗೊಂಡಿದೆ.</p>.<p>ಪ್ರವಾಹ ಭೀತಿಯ ಬಗ್ಗೆ ಶುಕ್ರವಾರ ಮುನ್ನೆಚ್ಚರಿಕೆ ನೀಡಿದ್ದರಿಂದ ಗ್ರಾಮಸ್ಥರು ಸಾಮಗ್ರಿಗಳು ಮತ್ತು ಜಾನುವಾರುಗಳನ್ನು ಟ್ರ್ಯಾಕ್ಟರ್, ಜೀಪು ಮತ್ತಿತರ ವಾಹನಗಳ ಮೂಲಕ ಸುರಕ್ಷಿತ ಸ್ಥಳಕ್ಕೆ ಸಾಗಿಸಿ ಸ್ಥಳಾಂತರಗೊಂಡಿದ್ದಾರೆ. ಕೆಲವರು ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ತೆರೆದಿರುವ ಕಾಳಜಿ ಕೇಂದ್ರದಲ್ಲಿ ಇದ್ದಾರೆ. ಸಾವು–ನೋವು ವರದಿಯಾಗಿಲ್ಲ.</p>.<p>ಮಸಗುಪ್ಪಿ ಮತ್ತು ತಿಗಡಿ ಸೇತುವೆಯು ಜಲಾವೃತಗೊಂಡಿದ್ದರಿಂದ ಶುಕ್ರವಾರ ಸಂಜೆಯಿಂದ ಯಾದವಾಡ, ಬಾಗಲಕೋಟೆ ಮತ್ತು ಸಂಕೇಶ್ವರ, ನಿಪ್ಪಾಣಿ ಕಡೆಗೆ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.</p>.<p>ಸುಣಧೋಳಿ, ಹುಣಶ್ಯಾಳ ಪಿವೈ, ಢವಳೇಶ್ವರ ಸೇತುವೆಗಳು ಜಲಾವೃತಗೊಂಡಿದ್ದರಿಂದ ಹಲವಾರು ಗ್ರಾಮಗಳಿಗೆ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಹಲವು ಗ್ರಾಮಗಳಿಗೆ ನೀರು ನುಗ್ಗಿದ್ದು ಜನರು ಪರದಾಡುವಂತಾಗಿದೆ. ಸಾವಿರಾರು ಎಕರೆ ಬೆಳೆಗಳು ನೀರಲ್ಲಿ ನಿಂತಿವೆ. 18 ಮನೆಗಳಿಗೆ ಭಾಗಶಃ ಹಾನಿಯಾಗಿದೆ.</p>.<p>ಪಟಗುಂದಿಯಲ್ಲಿ 4, ವಡೇರಹಟ್ಟಿಯಲ್ಲಿ 2, ಹುಣ್ಯಶಾಳ ಪಿ.ವೈ. 2, ಮಸಗುಪ್ಪಿ, ಸುಣಧೋಳಿ, ಮುನ್ಯಾಳ ಸ್ವಾಮಿ ತೋಟದಲ್ಲಿ ಪರಿಹಾರ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ ಎಂದು ತಹಶೀಲ್ದಾರ್ ಡಿ.ಜೆ. ಮಹಾತ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೂಡಲಗಿ (ಬೆಳಗಾವಿ ಜಿಲ್ಲೆ): </strong>ಸತತ ಮಳೆಯಿಂದಾಗಿ ಎರಡು ದಿನಗಳಿಂದ ಘಟಪ್ರಭಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ತಾಲ್ಲೂಕಿನ ಮಸಗುಪ್ಪಿ ಗ್ರಾಮವು ಸಂಪೂರ್ಣ ಜಲಾವೃತಗೊಂಡಿದೆ.</p>.<p>ಪ್ರವಾಹ ಭೀತಿಯ ಬಗ್ಗೆ ಶುಕ್ರವಾರ ಮುನ್ನೆಚ್ಚರಿಕೆ ನೀಡಿದ್ದರಿಂದ ಗ್ರಾಮಸ್ಥರು ಸಾಮಗ್ರಿಗಳು ಮತ್ತು ಜಾನುವಾರುಗಳನ್ನು ಟ್ರ್ಯಾಕ್ಟರ್, ಜೀಪು ಮತ್ತಿತರ ವಾಹನಗಳ ಮೂಲಕ ಸುರಕ್ಷಿತ ಸ್ಥಳಕ್ಕೆ ಸಾಗಿಸಿ ಸ್ಥಳಾಂತರಗೊಂಡಿದ್ದಾರೆ. ಕೆಲವರು ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ತೆರೆದಿರುವ ಕಾಳಜಿ ಕೇಂದ್ರದಲ್ಲಿ ಇದ್ದಾರೆ. ಸಾವು–ನೋವು ವರದಿಯಾಗಿಲ್ಲ.</p>.<p>ಮಸಗುಪ್ಪಿ ಮತ್ತು ತಿಗಡಿ ಸೇತುವೆಯು ಜಲಾವೃತಗೊಂಡಿದ್ದರಿಂದ ಶುಕ್ರವಾರ ಸಂಜೆಯಿಂದ ಯಾದವಾಡ, ಬಾಗಲಕೋಟೆ ಮತ್ತು ಸಂಕೇಶ್ವರ, ನಿಪ್ಪಾಣಿ ಕಡೆಗೆ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.</p>.<p>ಸುಣಧೋಳಿ, ಹುಣಶ್ಯಾಳ ಪಿವೈ, ಢವಳೇಶ್ವರ ಸೇತುವೆಗಳು ಜಲಾವೃತಗೊಂಡಿದ್ದರಿಂದ ಹಲವಾರು ಗ್ರಾಮಗಳಿಗೆ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಹಲವು ಗ್ರಾಮಗಳಿಗೆ ನೀರು ನುಗ್ಗಿದ್ದು ಜನರು ಪರದಾಡುವಂತಾಗಿದೆ. ಸಾವಿರಾರು ಎಕರೆ ಬೆಳೆಗಳು ನೀರಲ್ಲಿ ನಿಂತಿವೆ. 18 ಮನೆಗಳಿಗೆ ಭಾಗಶಃ ಹಾನಿಯಾಗಿದೆ.</p>.<p>ಪಟಗುಂದಿಯಲ್ಲಿ 4, ವಡೇರಹಟ್ಟಿಯಲ್ಲಿ 2, ಹುಣ್ಯಶಾಳ ಪಿ.ವೈ. 2, ಮಸಗುಪ್ಪಿ, ಸುಣಧೋಳಿ, ಮುನ್ಯಾಳ ಸ್ವಾಮಿ ತೋಟದಲ್ಲಿ ಪರಿಹಾರ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ ಎಂದು ತಹಶೀಲ್ದಾರ್ ಡಿ.ಜೆ. ಮಹಾತ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>