ಬೆಳಗಾವಿ: ಮಹಾರಾಷ್ಟ್ರದಲ್ಲಿ ವರುಣನ ಆರ್ಭಟ ಮತ್ತಷ್ಟು ಹೆಚ್ಚಿದ್ದು ಕೊಯ್ನಾ, ವಾರ್ಣಾ ಮತ್ತಿತರ ಜಲಾಶಯಗಳು ಶೇ 90ರಷ್ಟು ಭರ್ತಿಯಾಗಿವೆ. ಹೆಚ್ಚುವರಿ ನೀರು ರಾಜ್ಯದೊಳಗೆ ಪ್ರವೇಶಿಸುತ್ತಿದೆ. ಈಗಾಗಲೇ ಕೃಷ್ಣಾ ಹಾಗೂ ಉಪನದಿಗಳ ತೀರದ ಪ್ರದೇಶಗಳಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದ್ದು, ಮುಂಬರುವ ದಿನಗಳಲ್ಲಿ ಇನ್ನೂ ಅಪಾಯಕಾರಿ ಸನ್ನಿವೇಶ ಎದುರಾಗುವ ಆತಂಕ ಸೃಷ್ಠಿಯಾಗಿದೆ.