<p><strong>ಬೆಳಗಾವಿ:</strong> ‘ಪ್ರವಾಹ ಮತ್ತು ಅತಿವೃಷ್ಟಿಯಿಂದಾಗಿ ಜಿಲ್ಲೆಯಲ್ಲಿ ಬೆಳೆ, ಮನೆಗಳು ಹಾಗೂ ರಸ್ತೆ, ಸೇತುವೆ, ಕೆರೆ–ಕಟ್ಟೆ ಮೊದಲಾದ ಮೂಲಸೌಕರ್ಯಗಳು ಸೇರಿದಂತೆ ಒಟ್ಟು ₹ 7,800 ಕೋಟಿ ಹಾನಿಯಾಗಿದೆ’ ಎಂದು ಸಚಿವ ಗೋವಿಂದ ಕಾರಜೋಳ ತಿಳಿಸಿದರು.</p>.<p>ಇಲ್ಲಿನ ಪ್ರವಾಸಿಮಂದಿರದಲ್ಲಿ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಪತ್ರಕರ್ತರೊಂದಿಗೆ ಶುಕ್ರವಾರ ಮಾತನಾಡಿದ ಅವರು, ‘21,300 ವಿದ್ಯುತ್ ಕಂಬಗಳು ಹಾಗೂ 5,300 ಟ್ರಾನ್ಸ್ಫಾರ್ಮರ್ಗಳು ಮುಳುಗಡೆಯಾಗಿವೆ. ನೀರು ಕಡಿಮೆಯಾದ ಬಳಿಕ ಅವುಗಳ ಹಾನಿ ಅಂದಾಜು ಮಾಡಲಾಗುವುದು’ ಎಂದು ಹೇಳಿದರು.</p>.<p>‘51 ಕಾಳಜಿ ಕೇಂದ್ರಗಳಲ್ಲಿ 38ಸಾವಿರ ಜನರಿಗೆ ಆಶ್ರಯ ನೀಡಲಾಗಿದೆ. ಜನರಿಗೆ ಊಟೋಪಚಾರ, ಜಾನುವಾರುಗಳಿಗೆ ಮೇವು ಹಾಗೂ ಔಷಧೋಪಚಾರದ ವ್ಯವಸ್ಥೆ ಮಾಡಲಾಗಿದೆ. ಇನ್ನೂ 8–10 ದಿನಗಳವರೆಗೆ ಕೇಂದ್ರಗಳನ್ನು ಮುಂದುವರಿಸುವಂತೆ ಸೂಚಿಸಿದ್ದೇನೆ’ ಎಂದು ತಿಳಿಸಿದರು.</p>.<p><a href="https://www.prajavani.net/district/vijayanagara/karnataka-cabinet-expansion-basavaraj-bommai-anand-singh-bjp-politics-855233.html" itemprop="url">ನನಗೆ ಯಾವ ಖಾತೆ ಬೇಕೆಂದು ಸಿ.ಎಂಗೆ ಹೇಳಿರುವೆ: ಸಚಿವ ಆನಂದ್ ಸಿಂಗ್ </a></p>.<p>‘ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆ ವ್ಯಾಪ್ತಿಯ 560 ಹಳ್ಳಿ ರಸ್ತೆಗಳು ಹಾಳಾಗಿವೆ. ಆ ಇಲಾಖೆಗೆ ಒಟ್ಟು ₹ 772 ಕೋಟಿ, ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ 300 ಕಿ.ಮೀ. ರಸ್ತೆ, 70 ಸೇತುವೆಗಳು ಹಾಳಾಗಿ ₹ 300 ಹಾನಿಯಾಗಿದೆ. ಮನೆಗಳಿಗೆ ಸಂಬಂಧಿಸಿದ ಹಾನಿ ₹ 150 ಕೋಟಿ ಆಗಿದೆ. ಬೆಳೆ ಹಾನಿಯ ಮೊತ್ತವೇ ₹ 1,430 ಕೋಟಿ ಆಗುತ್ತದೆ ಎಂದು ಅಂದಾಜಿಸಲಾಗಿದೆ. 7,350 ಕೋಳಿಗಳು ಕೊಚ್ಚಿ ಹೋಗಿವೆ’ ಎಂದು ಮಾಹಿತಿ ನೀಡಿದರು.</p>.<p>‘ಎನ್ಡಿಆರ್ಎಫ್ ಹಾಗೂ ಎಸ್ಡಿಆರ್ಎಫ್ ನಿಯಮಾವಳಿ ಪ್ರಕಾರ ಪರಿಹಾರವನ್ನು ಆರ್.ಟಿ.ಜಿ.ಎಸ್. ಮೂಲಕ ಸಂತ್ರಸ್ತರ ಖಾತೆಗಳಿಗೆ ಪಾವತಿಸಲು ಸೂಚಿಸಲಾಗಿದೆ. ಚೆಕ್ ಅಥವಾ ನಗದು ಕೊಡದಂತೆ ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗಿದೆ. ಕೆಲವರು ಕೈಚಳಕ ಮಾಡುತ್ತಾರೆ. ಹೀಗಾಗಿ, ಅದಕ್ಕೆ ಅವಕಾಶ ಕೊಡುದಂತೆ ತಿಳಿಸಿದ್ದೇನೆ’ ಎಂದರು.</p>.<p>‘ಜಿಲ್ಲಾಧಿಕಾರಿ ಖಾತೆಯಲ್ಲಿ ₹ 92 ಕೋಟಿ ರೂಪಾಯಿ ಇದೆ. ತುರ್ತು ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು. ರಸ್ತೆ ಮತ್ತಿತರ ಮೂಲಸೌಕರ್ಯಗಳ ತುರ್ತು ದುರಸ್ತಿಗೆ ₹ 120 ಕೋಟಿ ಬಿಡುಗಡೆಯಾಗಿದೆ’ ಎಂದು ಹೇಳಿದರು.</p>.<p>‘ಕೇಂದ್ರ ಸರ್ಕಾರವು ರಾಜ್ಯಕ್ಕೆ 2019–20ರಲ್ಲಿ ₹ 1,725, 2020–21ನೇ ಸಾಲಿನಲ್ಲಿ ₹725 ಕೋಟಿಯನ್ನು ಮಾರ್ಗಸೂಚಿ ಪ್ರಕಾರ ಬಿಡುಗಡೆ ಮಾಡಿದೆ. ಈ ಬಾರಿಯ ಹಾನಿ ವರದಿ ಸಲ್ಲಿಸಿದ ಬಳಿಕ ಅಧ್ಯಯನ ತಂಡ ಕಳುಹಿಸಲಿದೆ’ ಎಂದರು.</p>.<p>‘ಪ್ರವಾಹ ಪರಿಹಾರ ವಿತರಣೆಯಲ್ಲಿ ಲೋಪದೋಷ ಎಸಗಿದರೆ ಕೂಡಲೇ ಅಮಾನತು ಮಾಡಬೇಕು. ಅಗತ್ಯಬಿದ್ದರೆ ಪ್ರಕರಣ ದಾಖಲಿಸುವಂತೆ ಜಿಲ್ಲಾಧಿಕಾರಿಗೆ ಸೂಚಿಸಲಾಗಿದೆ’ ಎಂದು ಪ್ರತಿಕ್ರಿಯಿಸಿದರು.</p>.<p><a href="https://www.prajavani.net/karnataka-news/cm-basavaraj-bommai-reaction-about-schools-reopening-in-karnataka-855220.html" itemprop="url">ಆಗಸ್ಟ್ 23ರಿಂದ 9, 10 ಮತ್ತು ಪಿಯುಸಿ ತರಗತಿ ಪ್ರಾರಂಭ: ಬಸವರಾಜ ಬೊಮ್ಮಾಯಿ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ಪ್ರವಾಹ ಮತ್ತು ಅತಿವೃಷ್ಟಿಯಿಂದಾಗಿ ಜಿಲ್ಲೆಯಲ್ಲಿ ಬೆಳೆ, ಮನೆಗಳು ಹಾಗೂ ರಸ್ತೆ, ಸೇತುವೆ, ಕೆರೆ–ಕಟ್ಟೆ ಮೊದಲಾದ ಮೂಲಸೌಕರ್ಯಗಳು ಸೇರಿದಂತೆ ಒಟ್ಟು ₹ 7,800 ಕೋಟಿ ಹಾನಿಯಾಗಿದೆ’ ಎಂದು ಸಚಿವ ಗೋವಿಂದ ಕಾರಜೋಳ ತಿಳಿಸಿದರು.</p>.<p>ಇಲ್ಲಿನ ಪ್ರವಾಸಿಮಂದಿರದಲ್ಲಿ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಪತ್ರಕರ್ತರೊಂದಿಗೆ ಶುಕ್ರವಾರ ಮಾತನಾಡಿದ ಅವರು, ‘21,300 ವಿದ್ಯುತ್ ಕಂಬಗಳು ಹಾಗೂ 5,300 ಟ್ರಾನ್ಸ್ಫಾರ್ಮರ್ಗಳು ಮುಳುಗಡೆಯಾಗಿವೆ. ನೀರು ಕಡಿಮೆಯಾದ ಬಳಿಕ ಅವುಗಳ ಹಾನಿ ಅಂದಾಜು ಮಾಡಲಾಗುವುದು’ ಎಂದು ಹೇಳಿದರು.</p>.<p>‘51 ಕಾಳಜಿ ಕೇಂದ್ರಗಳಲ್ಲಿ 38ಸಾವಿರ ಜನರಿಗೆ ಆಶ್ರಯ ನೀಡಲಾಗಿದೆ. ಜನರಿಗೆ ಊಟೋಪಚಾರ, ಜಾನುವಾರುಗಳಿಗೆ ಮೇವು ಹಾಗೂ ಔಷಧೋಪಚಾರದ ವ್ಯವಸ್ಥೆ ಮಾಡಲಾಗಿದೆ. ಇನ್ನೂ 8–10 ದಿನಗಳವರೆಗೆ ಕೇಂದ್ರಗಳನ್ನು ಮುಂದುವರಿಸುವಂತೆ ಸೂಚಿಸಿದ್ದೇನೆ’ ಎಂದು ತಿಳಿಸಿದರು.</p>.<p><a href="https://www.prajavani.net/district/vijayanagara/karnataka-cabinet-expansion-basavaraj-bommai-anand-singh-bjp-politics-855233.html" itemprop="url">ನನಗೆ ಯಾವ ಖಾತೆ ಬೇಕೆಂದು ಸಿ.ಎಂಗೆ ಹೇಳಿರುವೆ: ಸಚಿವ ಆನಂದ್ ಸಿಂಗ್ </a></p>.<p>‘ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆ ವ್ಯಾಪ್ತಿಯ 560 ಹಳ್ಳಿ ರಸ್ತೆಗಳು ಹಾಳಾಗಿವೆ. ಆ ಇಲಾಖೆಗೆ ಒಟ್ಟು ₹ 772 ಕೋಟಿ, ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ 300 ಕಿ.ಮೀ. ರಸ್ತೆ, 70 ಸೇತುವೆಗಳು ಹಾಳಾಗಿ ₹ 300 ಹಾನಿಯಾಗಿದೆ. ಮನೆಗಳಿಗೆ ಸಂಬಂಧಿಸಿದ ಹಾನಿ ₹ 150 ಕೋಟಿ ಆಗಿದೆ. ಬೆಳೆ ಹಾನಿಯ ಮೊತ್ತವೇ ₹ 1,430 ಕೋಟಿ ಆಗುತ್ತದೆ ಎಂದು ಅಂದಾಜಿಸಲಾಗಿದೆ. 7,350 ಕೋಳಿಗಳು ಕೊಚ್ಚಿ ಹೋಗಿವೆ’ ಎಂದು ಮಾಹಿತಿ ನೀಡಿದರು.</p>.<p>‘ಎನ್ಡಿಆರ್ಎಫ್ ಹಾಗೂ ಎಸ್ಡಿಆರ್ಎಫ್ ನಿಯಮಾವಳಿ ಪ್ರಕಾರ ಪರಿಹಾರವನ್ನು ಆರ್.ಟಿ.ಜಿ.ಎಸ್. ಮೂಲಕ ಸಂತ್ರಸ್ತರ ಖಾತೆಗಳಿಗೆ ಪಾವತಿಸಲು ಸೂಚಿಸಲಾಗಿದೆ. ಚೆಕ್ ಅಥವಾ ನಗದು ಕೊಡದಂತೆ ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗಿದೆ. ಕೆಲವರು ಕೈಚಳಕ ಮಾಡುತ್ತಾರೆ. ಹೀಗಾಗಿ, ಅದಕ್ಕೆ ಅವಕಾಶ ಕೊಡುದಂತೆ ತಿಳಿಸಿದ್ದೇನೆ’ ಎಂದರು.</p>.<p>‘ಜಿಲ್ಲಾಧಿಕಾರಿ ಖಾತೆಯಲ್ಲಿ ₹ 92 ಕೋಟಿ ರೂಪಾಯಿ ಇದೆ. ತುರ್ತು ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು. ರಸ್ತೆ ಮತ್ತಿತರ ಮೂಲಸೌಕರ್ಯಗಳ ತುರ್ತು ದುರಸ್ತಿಗೆ ₹ 120 ಕೋಟಿ ಬಿಡುಗಡೆಯಾಗಿದೆ’ ಎಂದು ಹೇಳಿದರು.</p>.<p>‘ಕೇಂದ್ರ ಸರ್ಕಾರವು ರಾಜ್ಯಕ್ಕೆ 2019–20ರಲ್ಲಿ ₹ 1,725, 2020–21ನೇ ಸಾಲಿನಲ್ಲಿ ₹725 ಕೋಟಿಯನ್ನು ಮಾರ್ಗಸೂಚಿ ಪ್ರಕಾರ ಬಿಡುಗಡೆ ಮಾಡಿದೆ. ಈ ಬಾರಿಯ ಹಾನಿ ವರದಿ ಸಲ್ಲಿಸಿದ ಬಳಿಕ ಅಧ್ಯಯನ ತಂಡ ಕಳುಹಿಸಲಿದೆ’ ಎಂದರು.</p>.<p>‘ಪ್ರವಾಹ ಪರಿಹಾರ ವಿತರಣೆಯಲ್ಲಿ ಲೋಪದೋಷ ಎಸಗಿದರೆ ಕೂಡಲೇ ಅಮಾನತು ಮಾಡಬೇಕು. ಅಗತ್ಯಬಿದ್ದರೆ ಪ್ರಕರಣ ದಾಖಲಿಸುವಂತೆ ಜಿಲ್ಲಾಧಿಕಾರಿಗೆ ಸೂಚಿಸಲಾಗಿದೆ’ ಎಂದು ಪ್ರತಿಕ್ರಿಯಿಸಿದರು.</p>.<p><a href="https://www.prajavani.net/karnataka-news/cm-basavaraj-bommai-reaction-about-schools-reopening-in-karnataka-855220.html" itemprop="url">ಆಗಸ್ಟ್ 23ರಿಂದ 9, 10 ಮತ್ತು ಪಿಯುಸಿ ತರಗತಿ ಪ್ರಾರಂಭ: ಬಸವರಾಜ ಬೊಮ್ಮಾಯಿ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>