<p><strong>ಅಥಣಿ:</strong> ‘ನೆರೆ ಪರಿಹಾರ ಕಾರ್ಯಕ್ಕೆ ಅನುದಾನ ನೀಡುವಲ್ಲಿ ಕೇಂದ್ರ ಸರ್ಕಾರ ತಾರತಮ್ಯ ಮಾಡುತ್ತಿದೆ. ಮಹಾರಾಷ್ಟ್ರಕ್ಕೊಂದು ನ್ಯಾಯ, ನಮಗೊಂದು ನ್ಯಾಯ ಮಾಡುತ್ತಿದೆ’ ಎಂದು ಕಾಂಗ್ರೆಸ್ ಮುಖಂಡ, ಶಾಸಕ ಎಂ.ಬಿ. ಪಾಟೀಲ ಟೀಕಿಸಿದರು.</p>.<p>ತಾಲ್ಲೂಕಿನ ನೆರೆಪೀಡಿತ ಪ್ರದೇಶಗಳಿಗೆ ಶುಕ್ರವಾರ ಭೇಟಿ ನೀಡಿ ಪರಿಹಾರ ಕೇಂದ್ರಗಳಲ್ಲಿರುವ ಜನರಿಗೆ ಸಾಂತ್ವನ ಹೇಳಿದ ನಂತರ ಪತ್ರಕರ್ತರೊಂದಿಗೆ ಅವರು ಮಾತನಾಡಿದರು.</p>.<p>‘ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರವೇ ಇದೆ. ಆದರೂ ರಾಜ್ಯಕ್ಕೆ ಸಮರ್ಪಕ ಅನುದಾನ ಸಿಕ್ಕಿಲ್ಲ. ನಮ್ಮ ಅಧಿಕಾರವಿದ್ದಾಗಲೂ ತಾರತಮ್ಯ ಮಾಡಿತ್ತು. ಉದ್ಯೋಗ ಖಾತ್ರಿ ಯೋಜನೆಯಡಿ ಬರಬೇಕಾದ ₹ 200 ಕೋಟಿ ನೀಡಲಿಲ್ಲ’ ಎಂದು ಟೀಕಿಸಿದರು.</p>.<p>‘ನೆರೆ ಪರಿಹಾರ ನೀಡುವ ವಿಷಯದಲ್ಲಿ ಸರ್ಕಾರಕ್ಕೆ ಕಾಂಗ್ರೆಸ್ ಸಂಪೂರ್ಣ ಸಹಕಾರ ನೀಡಲಿದೆ. ಇದರಲ್ಲಿ ಯಾವುದೇ ರಾಜಕೀಯ ಮಾಡುವುದಿಲ್ಲ. ಹೆಚ್ಚಿನ ಅನುದಾನ ಬಿಡುಗಡೆಗೆ ಒತ್ತಾಯಿಸಲು ಸರ್ವ ಪಕ್ಷಗಳ ನಿಯೋಗವನ್ನು ಕೇಂದ್ರದ ಬಳಿಗೆ ಕರೆದುಕೊಂಡು ಹೋದರೆ, ನಮಗೆ ಗೊತ್ತಿರುವಷ್ಟು ಮಾಹಿತಿ ಹಂಚಿಕೊಳ್ಳುತ್ತೇವೆ’ ಎಂದರು.</p>.<p>‘ನೆರೆ ಇಳಿದರೂ ಜನರು ಅವರ ಮನೆಗಳಿಗೆ ಹೋಗುವ ಸ್ಥಿತಿಯಲ್ಲಿಲ್ಲ. ಅದಕ್ಕಾಗಿ ಅವರಿಗೆ ಪರ್ಯಾಯ ವ್ಯವಸ್ಥೆ ಆಗಬೇಕು. ನಾನು ವಿಜಯಪುರ, ಬಾಗಲಕೋಟಿ, ಬೆಳಗಾವಿ ಜಿಲ್ಲೆಗಳ ಪ್ರವಾಸ ಮಾಡಿ ಪರಿಸ್ಥಿತಿ ಅಧ್ಯಯನ ಮಾಡಿದ್ದೇನೆ. ಸರ್ಕಾರಕ್ಕೆ ವರದಿ ಸಲ್ಲಿಸುತ್ತೇನೆ’ ಎಂದು ತಿಳಿಸಿದರು.</p>.<p>ಕಾಂಗ್ರೆಸ್ ಮುಖಂಡರಾದ ಸುನೀಲ ಸಂಕ, ಶಬ್ಬೀರ ಸಾತಬಚ್ಚೆ, ಚಿದಾನಂದ ಮುಕುನಿ, ನಿಶಾಂತ ದಳವಾಯಿ, ಶಿವು ಗುಡ್ಡಾಪುರ, ರಮೇಶ ಸಿಂದಗಿ, ಶ್ರೀಶೈಲ ಮೇತ್ರಿ, ರಾಘವೇಂದ್ರ ಹಳಿಂಗಳಿ, ಶ್ರೀಕಾಂತ ಪೂಜಾರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಥಣಿ:</strong> ‘ನೆರೆ ಪರಿಹಾರ ಕಾರ್ಯಕ್ಕೆ ಅನುದಾನ ನೀಡುವಲ್ಲಿ ಕೇಂದ್ರ ಸರ್ಕಾರ ತಾರತಮ್ಯ ಮಾಡುತ್ತಿದೆ. ಮಹಾರಾಷ್ಟ್ರಕ್ಕೊಂದು ನ್ಯಾಯ, ನಮಗೊಂದು ನ್ಯಾಯ ಮಾಡುತ್ತಿದೆ’ ಎಂದು ಕಾಂಗ್ರೆಸ್ ಮುಖಂಡ, ಶಾಸಕ ಎಂ.ಬಿ. ಪಾಟೀಲ ಟೀಕಿಸಿದರು.</p>.<p>ತಾಲ್ಲೂಕಿನ ನೆರೆಪೀಡಿತ ಪ್ರದೇಶಗಳಿಗೆ ಶುಕ್ರವಾರ ಭೇಟಿ ನೀಡಿ ಪರಿಹಾರ ಕೇಂದ್ರಗಳಲ್ಲಿರುವ ಜನರಿಗೆ ಸಾಂತ್ವನ ಹೇಳಿದ ನಂತರ ಪತ್ರಕರ್ತರೊಂದಿಗೆ ಅವರು ಮಾತನಾಡಿದರು.</p>.<p>‘ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರವೇ ಇದೆ. ಆದರೂ ರಾಜ್ಯಕ್ಕೆ ಸಮರ್ಪಕ ಅನುದಾನ ಸಿಕ್ಕಿಲ್ಲ. ನಮ್ಮ ಅಧಿಕಾರವಿದ್ದಾಗಲೂ ತಾರತಮ್ಯ ಮಾಡಿತ್ತು. ಉದ್ಯೋಗ ಖಾತ್ರಿ ಯೋಜನೆಯಡಿ ಬರಬೇಕಾದ ₹ 200 ಕೋಟಿ ನೀಡಲಿಲ್ಲ’ ಎಂದು ಟೀಕಿಸಿದರು.</p>.<p>‘ನೆರೆ ಪರಿಹಾರ ನೀಡುವ ವಿಷಯದಲ್ಲಿ ಸರ್ಕಾರಕ್ಕೆ ಕಾಂಗ್ರೆಸ್ ಸಂಪೂರ್ಣ ಸಹಕಾರ ನೀಡಲಿದೆ. ಇದರಲ್ಲಿ ಯಾವುದೇ ರಾಜಕೀಯ ಮಾಡುವುದಿಲ್ಲ. ಹೆಚ್ಚಿನ ಅನುದಾನ ಬಿಡುಗಡೆಗೆ ಒತ್ತಾಯಿಸಲು ಸರ್ವ ಪಕ್ಷಗಳ ನಿಯೋಗವನ್ನು ಕೇಂದ್ರದ ಬಳಿಗೆ ಕರೆದುಕೊಂಡು ಹೋದರೆ, ನಮಗೆ ಗೊತ್ತಿರುವಷ್ಟು ಮಾಹಿತಿ ಹಂಚಿಕೊಳ್ಳುತ್ತೇವೆ’ ಎಂದರು.</p>.<p>‘ನೆರೆ ಇಳಿದರೂ ಜನರು ಅವರ ಮನೆಗಳಿಗೆ ಹೋಗುವ ಸ್ಥಿತಿಯಲ್ಲಿಲ್ಲ. ಅದಕ್ಕಾಗಿ ಅವರಿಗೆ ಪರ್ಯಾಯ ವ್ಯವಸ್ಥೆ ಆಗಬೇಕು. ನಾನು ವಿಜಯಪುರ, ಬಾಗಲಕೋಟಿ, ಬೆಳಗಾವಿ ಜಿಲ್ಲೆಗಳ ಪ್ರವಾಸ ಮಾಡಿ ಪರಿಸ್ಥಿತಿ ಅಧ್ಯಯನ ಮಾಡಿದ್ದೇನೆ. ಸರ್ಕಾರಕ್ಕೆ ವರದಿ ಸಲ್ಲಿಸುತ್ತೇನೆ’ ಎಂದು ತಿಳಿಸಿದರು.</p>.<p>ಕಾಂಗ್ರೆಸ್ ಮುಖಂಡರಾದ ಸುನೀಲ ಸಂಕ, ಶಬ್ಬೀರ ಸಾತಬಚ್ಚೆ, ಚಿದಾನಂದ ಮುಕುನಿ, ನಿಶಾಂತ ದಳವಾಯಿ, ಶಿವು ಗುಡ್ಡಾಪುರ, ರಮೇಶ ಸಿಂದಗಿ, ಶ್ರೀಶೈಲ ಮೇತ್ರಿ, ರಾಘವೇಂದ್ರ ಹಳಿಂಗಳಿ, ಶ್ರೀಕಾಂತ ಪೂಜಾರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>