<p><strong>ರಾಮದುರ್ಗ:</strong> ಜನಪದ ಸಾಹಿತ್ಯ ಮತ್ತು ಸಂಸ್ಕೃತಿಗಳು ಜನಜೀವನದ ಜೀವನಾಡಿಯಾಗಿವೆ. ಅವುಗಳು ಜೀವವಾಹಿನಿಯಾಗಿ ಮನುಕುಲದ ಮೇಲೆ ಪ್ರಭಾವವನ್ನು ಬೀರುತ್ತ ಬಂದಿವೆ ಎಂದು ರಬಕವಿಯ ಜನಪದ ಸಾಹಿತಿ ಹಾಗೂ ಗಾಯಕ ಶ್ರೀಕಾಂತ ಕೆಂದೂಳಿ ಹೇಳಿದರು.</p>.<p>ಇಲ್ಲಿನ ಸಿ.ಎಸ್.ಬೆಂಬಳಗಿ ಕಾಲೇಜಿನಲ್ಲಿ ಪಿ.ಎಂ.ಜಗತಾಪ ದತ್ತಿನಿಧಿ ಮತ್ತು ಕರ್ನಾಟಕ ಸಂಘ, ಕನ್ನಡ ವಿಭಾಗದ ಸಹಯೋಗದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಜನಪದ ಕಲಾ ಸಂಭ್ರಮ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಕಾರ್ಯಕ್ರಮವನ್ನು ಪಿ.ಎಂ.ಜಗತಾಪ ಉದ್ಘಾಟಿಸಿ ಮಾತನಾಡಿ, ಜನಪದ ಸಾಹಿತ್ಯ ಮತ್ತು ಕಲೆಗಳು ಕನ್ನಡ ನಾಡಿನ ಸಂಸ್ಕೃತಿಯ ಪ್ರತಿಕಗಳಾಗಿವೆ. ಅವುಗಳು ಇಂದಿಗೂ ಜನಸಮುದಾಯಕ್ಕೆ ಮಾರ್ಗದರ್ಶಿಯಾಗಿವೆ ಎಂದು ಹೇಳಿದರು.</p>.<p>ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿದ್ಯಾ ಪ್ರಸಾರಕ ಸಮಿತಿಯ ಅಧ್ಯಕ್ಷ ಎಸ್.ಎಸ್.ಸುಲ್ತಾನಪೂರ ವಹಿಸಿದ್ದರು. ಕಾರ್ಯಕ್ರಮದ ಅಂಗವಾಗಿ ಜನಪದ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪದವಿ ಪಡೆದ ಸಾಲಹಳ್ಳಿಯ ಜನಪದ ಕಲಾವಿದೆ ಲಕ್ಷ್ಮೀಬಾಯಿ ನೀಲಪ್ಪನವರ ಹಾಗೂ ಅವರ ತಂಡದ ಕಲಾವಿದರನ್ನು ಸನ್ಮಾನಿಸಲಾಯಿತು.</p>.<p>ಕಾರ್ಯಕ್ರಮದಲ್ಲಿ ವಿದ್ಯಾ ಪ್ರಸಾರಕ ಸಮಿತಿಯ ಸದಸ್ಯ ವೈ.ಬಿ.ಕುಲಗೋಡ, ಟಿ.ದಾಮೋದರ ಹಾಜರಿದ್ದರು.</p>.<p>ವಿದ್ಯಾರ್ಥಿ-ವಿದ್ಯಾರ್ಥಿನಿಯರಿಂದ ಜನಪದ ಕಲಾಪ್ರದರ್ಶನಗಳು ಜರುಗಿದವು.</p>.<p>ಪ್ರಾಚಾರ್ಯ ಪಿ.ಬಿ.ತೆಗ್ಗಿಹಳ್ಳಿ ಸ್ವಾಗತಿಸಿದರು. ಕರ್ನಾಟಕ ಸಂಘದ ಕಾರ್ಯಾಧ್ಯಕ್ಷ ಎಚ್.ಪಿ.ಹಾಲೊಳ್ಳಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಮಖಾನಾ ಉಪಾಧ್ಯಕ್ಷ ಎಸ್.ಐ. ಮಳಗಲಿ ವಂದಿಸಿದರು. ಮಂಜುಳಾ ಮೂಡ್ಲವರ ಹಾಗೂ ಸರೋಜಾ ಆಲಗುಂಡಿ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮದುರ್ಗ:</strong> ಜನಪದ ಸಾಹಿತ್ಯ ಮತ್ತು ಸಂಸ್ಕೃತಿಗಳು ಜನಜೀವನದ ಜೀವನಾಡಿಯಾಗಿವೆ. ಅವುಗಳು ಜೀವವಾಹಿನಿಯಾಗಿ ಮನುಕುಲದ ಮೇಲೆ ಪ್ರಭಾವವನ್ನು ಬೀರುತ್ತ ಬಂದಿವೆ ಎಂದು ರಬಕವಿಯ ಜನಪದ ಸಾಹಿತಿ ಹಾಗೂ ಗಾಯಕ ಶ್ರೀಕಾಂತ ಕೆಂದೂಳಿ ಹೇಳಿದರು.</p>.<p>ಇಲ್ಲಿನ ಸಿ.ಎಸ್.ಬೆಂಬಳಗಿ ಕಾಲೇಜಿನಲ್ಲಿ ಪಿ.ಎಂ.ಜಗತಾಪ ದತ್ತಿನಿಧಿ ಮತ್ತು ಕರ್ನಾಟಕ ಸಂಘ, ಕನ್ನಡ ವಿಭಾಗದ ಸಹಯೋಗದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಜನಪದ ಕಲಾ ಸಂಭ್ರಮ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಕಾರ್ಯಕ್ರಮವನ್ನು ಪಿ.ಎಂ.ಜಗತಾಪ ಉದ್ಘಾಟಿಸಿ ಮಾತನಾಡಿ, ಜನಪದ ಸಾಹಿತ್ಯ ಮತ್ತು ಕಲೆಗಳು ಕನ್ನಡ ನಾಡಿನ ಸಂಸ್ಕೃತಿಯ ಪ್ರತಿಕಗಳಾಗಿವೆ. ಅವುಗಳು ಇಂದಿಗೂ ಜನಸಮುದಾಯಕ್ಕೆ ಮಾರ್ಗದರ್ಶಿಯಾಗಿವೆ ಎಂದು ಹೇಳಿದರು.</p>.<p>ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿದ್ಯಾ ಪ್ರಸಾರಕ ಸಮಿತಿಯ ಅಧ್ಯಕ್ಷ ಎಸ್.ಎಸ್.ಸುಲ್ತಾನಪೂರ ವಹಿಸಿದ್ದರು. ಕಾರ್ಯಕ್ರಮದ ಅಂಗವಾಗಿ ಜನಪದ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪದವಿ ಪಡೆದ ಸಾಲಹಳ್ಳಿಯ ಜನಪದ ಕಲಾವಿದೆ ಲಕ್ಷ್ಮೀಬಾಯಿ ನೀಲಪ್ಪನವರ ಹಾಗೂ ಅವರ ತಂಡದ ಕಲಾವಿದರನ್ನು ಸನ್ಮಾನಿಸಲಾಯಿತು.</p>.<p>ಕಾರ್ಯಕ್ರಮದಲ್ಲಿ ವಿದ್ಯಾ ಪ್ರಸಾರಕ ಸಮಿತಿಯ ಸದಸ್ಯ ವೈ.ಬಿ.ಕುಲಗೋಡ, ಟಿ.ದಾಮೋದರ ಹಾಜರಿದ್ದರು.</p>.<p>ವಿದ್ಯಾರ್ಥಿ-ವಿದ್ಯಾರ್ಥಿನಿಯರಿಂದ ಜನಪದ ಕಲಾಪ್ರದರ್ಶನಗಳು ಜರುಗಿದವು.</p>.<p>ಪ್ರಾಚಾರ್ಯ ಪಿ.ಬಿ.ತೆಗ್ಗಿಹಳ್ಳಿ ಸ್ವಾಗತಿಸಿದರು. ಕರ್ನಾಟಕ ಸಂಘದ ಕಾರ್ಯಾಧ್ಯಕ್ಷ ಎಚ್.ಪಿ.ಹಾಲೊಳ್ಳಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಮಖಾನಾ ಉಪಾಧ್ಯಕ್ಷ ಎಸ್.ಐ. ಮಳಗಲಿ ವಂದಿಸಿದರು. ಮಂಜುಳಾ ಮೂಡ್ಲವರ ಹಾಗೂ ಸರೋಜಾ ಆಲಗುಂಡಿ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>