<p><strong>ರಾಯಬಾಗ (ಬೆಳಗಾವಿ ಜಿಲ್ಲೆ):</strong> ತಾಲ್ಲೂಕಿನ ಬೂದಿಹಾಳ ಗ್ರಾಮದ ಬಳಿ ಗುರುವಾರ ರಾತ್ರಿ ಕೇವಲ ಐದು ಸಾವಿರ ರೂಪಾಯಿಗಾಗಿ ಜಾನಪದ ಗಾಯಕ ಮಾರುತಿ ಅಡಿವೆಪ್ಪ ಲಠ್ಠೆ (22) ಅವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ನಡೆದಿದೆ. </p>.<p>ಈರಪ್ಪ ವಸಂತ ಅಕ್ಕಿವಾಟೆ ಬಳಿ ಗಾಯಕ ಮಾರುತಿ ಲಠ್ಠೆ, ಕಬ್ಬು ಕಟಾವು ಮಾಡುವವರ ಗುಂಪಿನಲ್ಲಿ ಕೆಲಸ ಮಾಡುತ್ತಿದ್ದರು. ಅದಕ್ಕಾಗಿ ₹50 ಸಾವಿರ ಮುಂಗಡ ಹಣ ಪಡೆದಿದ್ದರು. ಅದರಲ್ಲಿ ₹45 ಸಾವಿರ ಮರು ಪಾವತಿಸಿದ್ದರು. ಇನ್ನೂ ಐದು ಸಾವಿರ ಕೊಡಬೇಕಾಗಿತ್ತು.</p>.<p>ತನ್ನ ಜಾನಪದ ಹಾಡುಗಳಿಗೆ ಬೇಡಿಕೆ ಬಂದ ಹಿನ್ನೆಲೆಯಲ್ಲಿ ಕಬ್ಬು ಕಟಾವು ಮತ್ತು ಕಾರ್ಖಾನೆಗೆ ಸಾಗಣೆ ಮಾಡುವ ಗುಂಪಿನಲ್ಲಿ ಕೆಲಸ ಬಿಟ್ಟು ಸಂಗೀತದ ಕಡೆಗೆ ಹೆಚ್ಚಿನ ಗಮನಹರಿಸಿದ್ದರು. ಹೀಗಾಗಿ ಮಾರುತಿ, ಈರಪ್ಪನ ಕೆಂಗಣ್ಣಿಗೆ ಗುರಿಯಾಗಿದ್ದರು.</p>.<p>ಬಾಕಿ ಹಣ ವಾಪಸ್ ನೀಡದಕ್ಕೂ ಆಕ್ರೋಶಗೊಂಡಿದ್ದ ಈರಪ್ಪ, ತನ್ನ ಸಹಚರರೊಂದಿಗೆ ಸೇರಿ ಮಾರುತಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಲ್ಲದೇ, ಆತನ ಮೇಲೆ ಕಾರು ಹಾಯಿಸಿದ್ದಾರೆ.</p>.<p>ಮಾರುತಿಗೆ ಕಾರು ಹರಿಸಿದ ದುಷ್ಕರ್ಮಿಗಳ ಕಾರು ಕೂಡ ಪಲ್ಟಿಯಾಗಿದ್ದು, ಕೆಲವರು ಗಾಯಗೊಂಡಿದ್ದಾರೆ. ಈ ವೇಳೆ ಆರೋಪಿ ಈರಪ್ಪ ಅಕ್ಕಿವಾಟೆಗೆ ಗೋಕಾಕ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಯಬಾಗ ಪೊಲೀಸ್ ಠಾಣೆಯಲ್ಲಿ 11 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.</p>.<p>ದೇವನಕಟ್ಟಿಯ ಗ್ರಾಮದ ಸಿದ್ದರಾಮ ವಡೆಯರ (32) ಹಾಗೂ ಜೋಡಟ್ಟಿ ಗ್ರಾಮದ ಆಕಾಶ ಉರ್ಫ್ ಅಕ್ಷಯ ಪೂಜೇರಿ (20) ಎಂಬ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಇತರರಿಗೆ ಶೋಧ ನಡೆಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಬಾಗ (ಬೆಳಗಾವಿ ಜಿಲ್ಲೆ):</strong> ತಾಲ್ಲೂಕಿನ ಬೂದಿಹಾಳ ಗ್ರಾಮದ ಬಳಿ ಗುರುವಾರ ರಾತ್ರಿ ಕೇವಲ ಐದು ಸಾವಿರ ರೂಪಾಯಿಗಾಗಿ ಜಾನಪದ ಗಾಯಕ ಮಾರುತಿ ಅಡಿವೆಪ್ಪ ಲಠ್ಠೆ (22) ಅವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ನಡೆದಿದೆ. </p>.<p>ಈರಪ್ಪ ವಸಂತ ಅಕ್ಕಿವಾಟೆ ಬಳಿ ಗಾಯಕ ಮಾರುತಿ ಲಠ್ಠೆ, ಕಬ್ಬು ಕಟಾವು ಮಾಡುವವರ ಗುಂಪಿನಲ್ಲಿ ಕೆಲಸ ಮಾಡುತ್ತಿದ್ದರು. ಅದಕ್ಕಾಗಿ ₹50 ಸಾವಿರ ಮುಂಗಡ ಹಣ ಪಡೆದಿದ್ದರು. ಅದರಲ್ಲಿ ₹45 ಸಾವಿರ ಮರು ಪಾವತಿಸಿದ್ದರು. ಇನ್ನೂ ಐದು ಸಾವಿರ ಕೊಡಬೇಕಾಗಿತ್ತು.</p>.<p>ತನ್ನ ಜಾನಪದ ಹಾಡುಗಳಿಗೆ ಬೇಡಿಕೆ ಬಂದ ಹಿನ್ನೆಲೆಯಲ್ಲಿ ಕಬ್ಬು ಕಟಾವು ಮತ್ತು ಕಾರ್ಖಾನೆಗೆ ಸಾಗಣೆ ಮಾಡುವ ಗುಂಪಿನಲ್ಲಿ ಕೆಲಸ ಬಿಟ್ಟು ಸಂಗೀತದ ಕಡೆಗೆ ಹೆಚ್ಚಿನ ಗಮನಹರಿಸಿದ್ದರು. ಹೀಗಾಗಿ ಮಾರುತಿ, ಈರಪ್ಪನ ಕೆಂಗಣ್ಣಿಗೆ ಗುರಿಯಾಗಿದ್ದರು.</p>.<p>ಬಾಕಿ ಹಣ ವಾಪಸ್ ನೀಡದಕ್ಕೂ ಆಕ್ರೋಶಗೊಂಡಿದ್ದ ಈರಪ್ಪ, ತನ್ನ ಸಹಚರರೊಂದಿಗೆ ಸೇರಿ ಮಾರುತಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಲ್ಲದೇ, ಆತನ ಮೇಲೆ ಕಾರು ಹಾಯಿಸಿದ್ದಾರೆ.</p>.<p>ಮಾರುತಿಗೆ ಕಾರು ಹರಿಸಿದ ದುಷ್ಕರ್ಮಿಗಳ ಕಾರು ಕೂಡ ಪಲ್ಟಿಯಾಗಿದ್ದು, ಕೆಲವರು ಗಾಯಗೊಂಡಿದ್ದಾರೆ. ಈ ವೇಳೆ ಆರೋಪಿ ಈರಪ್ಪ ಅಕ್ಕಿವಾಟೆಗೆ ಗೋಕಾಕ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಯಬಾಗ ಪೊಲೀಸ್ ಠಾಣೆಯಲ್ಲಿ 11 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.</p>.<p>ದೇವನಕಟ್ಟಿಯ ಗ್ರಾಮದ ಸಿದ್ದರಾಮ ವಡೆಯರ (32) ಹಾಗೂ ಜೋಡಟ್ಟಿ ಗ್ರಾಮದ ಆಕಾಶ ಉರ್ಫ್ ಅಕ್ಷಯ ಪೂಜೇರಿ (20) ಎಂಬ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಇತರರಿಗೆ ಶೋಧ ನಡೆಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>