<p><strong>ಬೆಳಗಾವಿ:</strong> ಇಲ್ಲಿನ ‘ಹ್ಯೂಮ್ಯಾನಿಟಿ ಫೌಂಡೇಷನ್’ ಮತ್ತು ಇನ್ನರ್ವೀಲ್ ಕ್ಲಬ್ ವತಿಯಿಂದ ಮಂಗಳಮುಖಿಯರಿಗೆ ಮೊಬೈಲ್ ಕ್ಯಾಂಟೀನ್ (ತಳ್ಳು ಗಾಡಿ) ಅನ್ನು ಬುಧವಾರ ವಿತರಿಸಲಾಯಿತು.</p>.<p>ಕ್ಲಬ್ನ ಜಿಲ್ಲಾ ಘಟಕದ ಅಧ್ಯಕ್ಷೆ ರತ್ನಾ ಭೈರೆ ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟಿಸಿದರು.</p>.<p>‘ಜಿಲ್ಲೆಯಲ್ಲಿ ಮಂಗಳಮುಖಿಯರ ಸಬಲೀಕರಣ ನಿಟ್ಟಿನಲ್ಲಿ ಹಾಗೂ ಅವರನ್ನು ಸಮಾಜದ ಮುಖ್ಯವಾಹಿಸಿಗೆ ತರುವ ಉದ್ದೇಶದಿಂದ ತಳ್ಳು ಗಾಡಿಗಳನ್ನು ನೀಡಲಾಗುತ್ತಿದೆ. ಅವರು ಅದನ್ನು ಬಳಸಿ ರಸ್ತೆಬದಿಯಲ್ಲಿ ಕ್ಯಾಂಟೀನ್ ಆರಂಭಿಸಿ ತಿನಿಸುಗಳನ್ನು ಮಾರಿ ಜೀವನ ರೂಪಿಸಿಕೊಳ್ಳಬಹುದು. ಇದರಿಂದ ಅವರು ಬೇರೊಬ್ಬರ ಮೇಲೆ ಅವಲಂಬಿತವಾಗುವುದು ತಪ್ಪುತ್ತದೆ. ಅವರಿಗೂ ಸಮಾಜದಲ್ಲಿ ಉತ್ತಮ ಸ್ಥಾನ ದೊರೆಯಬೇಕು ಎನ್ನುವುದು ನಮ್ಮ ಆಶಯವಾಗಿದೆ. ನಗರದಲ್ಲಿ ಇದೇ ಮೊದಲಿಗೆ ಈ ಉಪಕ್ರಮ ಕೈಗೊಂಡಿದ್ದೇವೆ’ ಎಂದರು.</p>.<p>ಹ್ಯೂಮಾನಿಟಿ ಪ್ರತಿಷ್ಠಾನದ ಅಧ್ಯಕ್ಷೆ ಸುಷ್ಮಾ ಶೆಟ್ಟಿ, ‘ಮಂಗಳಮುಖಿಯರಿಗೆ ಕಾನೂನು ಜಾಗೃತಿಯನ್ನೂ ಮೂಡಿಸಲಾಗುತ್ತಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ಇಲ್ಲಿನ ‘ಹ್ಯೂಮ್ಯಾನಿಟಿ ಫೌಂಡೇಷನ್’ ಮತ್ತು ಇನ್ನರ್ವೀಲ್ ಕ್ಲಬ್ ವತಿಯಿಂದ ಮಂಗಳಮುಖಿಯರಿಗೆ ಮೊಬೈಲ್ ಕ್ಯಾಂಟೀನ್ (ತಳ್ಳು ಗಾಡಿ) ಅನ್ನು ಬುಧವಾರ ವಿತರಿಸಲಾಯಿತು.</p>.<p>ಕ್ಲಬ್ನ ಜಿಲ್ಲಾ ಘಟಕದ ಅಧ್ಯಕ್ಷೆ ರತ್ನಾ ಭೈರೆ ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟಿಸಿದರು.</p>.<p>‘ಜಿಲ್ಲೆಯಲ್ಲಿ ಮಂಗಳಮುಖಿಯರ ಸಬಲೀಕರಣ ನಿಟ್ಟಿನಲ್ಲಿ ಹಾಗೂ ಅವರನ್ನು ಸಮಾಜದ ಮುಖ್ಯವಾಹಿಸಿಗೆ ತರುವ ಉದ್ದೇಶದಿಂದ ತಳ್ಳು ಗಾಡಿಗಳನ್ನು ನೀಡಲಾಗುತ್ತಿದೆ. ಅವರು ಅದನ್ನು ಬಳಸಿ ರಸ್ತೆಬದಿಯಲ್ಲಿ ಕ್ಯಾಂಟೀನ್ ಆರಂಭಿಸಿ ತಿನಿಸುಗಳನ್ನು ಮಾರಿ ಜೀವನ ರೂಪಿಸಿಕೊಳ್ಳಬಹುದು. ಇದರಿಂದ ಅವರು ಬೇರೊಬ್ಬರ ಮೇಲೆ ಅವಲಂಬಿತವಾಗುವುದು ತಪ್ಪುತ್ತದೆ. ಅವರಿಗೂ ಸಮಾಜದಲ್ಲಿ ಉತ್ತಮ ಸ್ಥಾನ ದೊರೆಯಬೇಕು ಎನ್ನುವುದು ನಮ್ಮ ಆಶಯವಾಗಿದೆ. ನಗರದಲ್ಲಿ ಇದೇ ಮೊದಲಿಗೆ ಈ ಉಪಕ್ರಮ ಕೈಗೊಂಡಿದ್ದೇವೆ’ ಎಂದರು.</p>.<p>ಹ್ಯೂಮಾನಿಟಿ ಪ್ರತಿಷ್ಠಾನದ ಅಧ್ಯಕ್ಷೆ ಸುಷ್ಮಾ ಶೆಟ್ಟಿ, ‘ಮಂಗಳಮುಖಿಯರಿಗೆ ಕಾನೂನು ಜಾಗೃತಿಯನ್ನೂ ಮೂಡಿಸಲಾಗುತ್ತಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>