‘ಜಿಲ್ಲೆಯಲ್ಲಿ ಮಂಗಳಮುಖಿಯರ ಸಬಲೀಕರಣ ನಿಟ್ಟಿನಲ್ಲಿ ಹಾಗೂ ಅವರನ್ನು ಸಮಾಜದ ಮುಖ್ಯವಾಹಿಸಿಗೆ ತರುವ ಉದ್ದೇಶದಿಂದ ತಳ್ಳು ಗಾಡಿಗಳನ್ನು ನೀಡಲಾಗುತ್ತಿದೆ. ಅವರು ಅದನ್ನು ಬಳಸಿ ರಸ್ತೆಬದಿಯಲ್ಲಿ ಕ್ಯಾಂಟೀನ್ ಆರಂಭಿಸಿ ತಿನಿಸುಗಳನ್ನು ಮಾರಿ ಜೀವನ ರೂಪಿಸಿಕೊಳ್ಳಬಹುದು. ಇದರಿಂದ ಅವರು ಬೇರೊಬ್ಬರ ಮೇಲೆ ಅವಲಂಬಿತವಾಗುವುದು ತಪ್ಪುತ್ತದೆ. ಅವರಿಗೂ ಸಮಾಜದಲ್ಲಿ ಉತ್ತಮ ಸ್ಥಾನ ದೊರೆಯಬೇಕು ಎನ್ನುವುದು ನಮ್ಮ ಆಶಯವಾಗಿದೆ. ನಗರದಲ್ಲಿ ಇದೇ ಮೊದಲಿಗೆ ಈ ಉಪಕ್ರಮ ಕೈಗೊಂಡಿದ್ದೇವೆ’ ಎಂದರು.