‘ಸಮಾಜ ಸೇವಕಿ ಶೈಲಜಾ ಭಿಂಗೆ ಮತ್ತು ಸಾಹಿತಿ ಜಯಶೀಲಾ ಬ್ಯಾಕೋಡ ಅವರು ಆಹಾರ ಧಾನ್ಯ ನೀಡಿದ್ದಾರೆ. ಕೋವಿಡ್–19 ಲಾಕ್ಡೌನ್ನಿಂದಾಗಿ ಮದುವೆ ಮೊದಲಾದ ಶುಭ ಸಮಾರಂಭಗಳು ನಡೆಯದೆ ಛಾಯಾಗ್ರಾಹಕರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಈ ವರ್ಗದವರ ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡ ಕ್ರಿಯಾ ಸಮಿತಿಯ ಅಧ್ಯಕ್ಷ ಅಶೋಕ ಚಂದರಗಿ ಅವರು ಕಷ್ಟದಲ್ಲಿರುವವರಿಗೆ ನೆರವಾಗುತ್ತಿದ್ದಾರೆ. 2018ರಲ್ಲಿ ಪ್ರವಾಹ ಬಂದಾಗ ಕೊಡಗಿಗೆ ಹೋಗಿ ನೆರವಾಗಿದ್ದರು. ಹೋದ ವರ್ಷ ಪ್ರವಾಹದ ಸಂದರ್ಭದಲ್ಲಿ ಜಿಲ್ಲೆಯ ಸಂತ್ರಸ್ತರಿಗೆ ನೆರವಿನ ಹಸ್ತ ಚಾಚಿದ್ದರು’ ಎಂದು ಹೇಳಿದರು.